ಟಿ.ನರಸಿಪುರ : ಅರುಂಧತಿ ನಗರದ ಊರ ಒತ್ತಿನ ಜಮೀನಿಲ್ಲಿ ಚಿರತೆ ಹೆಜ್ಜೆ ಗುರುತು ಕಾಣಿಸಿ ಕೊಂಡಿದ್ದು ಜನ ಭಯ ಭೀತರಾಗಿದ್ದಾರೆ.
ಇಲ್ಲಿನ ರೈತ ಸಂಪರ್ಕ ಕೇಂದ್ರದ ಬಳಿಯ ಸಣ್ಣಪುರಿ ನಾರಾಯಣಿ ರವರ ತೋಟದಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಇವರು ಮಾಹಿತಿ ನೀಡಿದ್ದಾರೆ.
ನಾರಾಯಣಿ ತೋಟದ ಗೇಟ್ ತಂತಿಬೇಲಿ ನೆಗೆದು ಪಕ್ಕದ ಜಮೀನಿನ ಕಡೆಗೆ ಹೋಗಿರುವ ಹೆಜ್ಜೆ ಗುರುತು ಪರಿಶೀಲಿಸಿದ ಅರಣ್ಯ ಸಿಬ್ಬಂದಿ ಇದು ಚಿರತೆ ಹೆಜ್ಜೆ ಗುರುತೆಂದು ಖಚಿತಪಡಿಸಿದ್ದಾರೆ. ಮುನ್ನೆಚ್ಚರಿಕೆ ವಹಿಸಿ ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬೋನು ಇರಿಸಿದ್ದಾರೆ.
ಶನಿವಾರ ಇಲ್ಲಿ ಕಾಣಿಸಿಕೊಂಡ ಚಿರತೆ ಹೆಜ್ಜೆಗುರುತು ಭಾನುವಾರ ಕುಕ್ಕೂರಿನ ಬಳಿ ಪತ್ತೆಯಾಗಿದೆ. ದಿನಾ 30ರಿಂದ 35ಕಿಮೀ ಕ್ರಮಿಸುವ ಚಿರತೆ ಈಗಾಗಲೆ ತಲಕಾಡು ಕುಕ್ಕೂರು, ಮುಡುಕುತೊರೆ, ಬಣವೆ ಕಾವೇರಿಪುರ, ಮೂಡಲಹುಂಡಿ ಹಾಗು ಗಡಿಗ್ರಾಮ ಮಡವಾಡಿ ವ್ಯಾಪ್ತಿಯ ಜಮೀನಿನಲ್ಲಿ ಚಿರತೆ ಓಡಾಡಿಕೊಂಡಿರುವ ಮಾಹಿತಿ ಅರಣ್ಯ ಇಲಾಖೆಗೆ ಲಭ್ಯವಾಗಿದೆ.
ಹೀಗಾಗಿ ತಲಕಾಡು, ಮುಡುಕುತೊರೆ, ಕುಕ್ಕೂರು, ಬಣವೆ ನಾಲ್ಕು ಗ್ರಾಮಗಳ ಸಮೀಪದ ಜಮೀನುಗಳಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಈಗಾಗಲೆ ನಾಲ್ಕು ಬೋನು ಇರಿಸಲಾಗಿದೆ.
ಇದಲ್ಲದೆ ತಲಕಾಡು ಅರುಂಧತಿ ನಗರದ ಊರೊತ್ತಿನ ಅಕ್ಕಪಕ್ಕದ ಜಮೀನಿನಲ್ಲಿ ಚಿರತೆ ಹೆಜ್ಜೆ ಗುರುತು ಆಗಾಗ್ಗೆ ಕಾಣಿಸಿ ಕೊಂಡಿರುವ ಹಿನ್ನೆಲೆಯಲ್ಲಿ, ಈ ಭಾಗದ ಜನ ಸಂಜೆ ವೇಳೆಯಲ್ಲಿ ಓಡಾಡಲು ಭಯ ಪಡುತ್ತಿದ್ದಾರೆ.
ಹೋಬಳಿ ಭಾಗದ ಅಲ್ಲಲ್ಲಿ ಆಗಾಗ್ಗೆ ಚಿರತೆ ಕಾಣಿಸಿಕೊಂಡು ಜನ ಭಯದಲ್ಲಿದ್ದಾರೆ. ಹೀಗಾಗಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕೂಡಲೆ ಅಗತ್ಯ ಕ್ರಮ ಕೈಗೊಂಡು, ಜನತೆಯಲ್ಲಿ ಆವರಿಸಿರುವ ಚಿರತೆ ಭಯ ಹೋಗಲಾಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…