ಹುಣಸೂರು/ಮೈಸೂರು: ಸಾಕು ಪ್ರಾಣಿ ಹಾಗೂ ಜಾನುವಾರುಗಳನ್ನು ಹೊಂಚು ಹಾಕಿ ಕೊಂದು ಹಾಕುತ್ತಿದ್ದ ಸುಮಾರು 6 ವರ್ಷದ ಚಿರತೆ ಬೋನಿನಲ್ಲಿ ಬಂಧಿಯಾಗಿರುವ ಘಟನೆ ಹನಗೋಡಿನ ಕೊಡ್ಲೂರಿನಲ್ಲಿ ನಡೆದಿದೆ.
ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ನಾಯಿ, ಮೇಕೆ ಸೇರಿದಂತೆ ಸಾಕು ಪ್ರಾಣಿಗಳ ಕೊಂದು ಹೊತ್ತೊಯ್ಯುತ್ತಿತ್ತು. ಶನಿವಾರ(ಆ.4) ಗ್ರಾಮದ ವಿನ್ಸೆಂಟ್ ಅವರಿಗೆ ಸೇರಿದ ಜಮೀನಿಗೆ ನುಗ್ಗಿ ಕರುವನ್ನು ಕೊಂದು ಹಾಕಿತ್ತು. ವಿನ್ಸೆಂಟ್ ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಪ್ರಾದೇಶಿಕ ವಿಭಾಗದ ಆರ್.ಎಫ್.ಒ. ನಂದಕುಮಾರ್, ಡಿ.ಆರ್.ಎಫ್.ಒ. ಮಲ್ಲಿಕಾರ್ಜುನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬೋನು ಇರಿಸಿದ್ದರು. ಶನಿವಾರ ರಾತ್ರಿ ಬೋನಿನಲ್ಲಿರಿಸಿದ್ದ ನಾಯಿಯನ್ನು ತಿನ್ನುವ ಆಸೆಯಿಂದ ಒಳಹೊಕ್ಕಿದ್ದ ಚಿರತೆ ಬೋನಿನಲ್ಲಿ ಬಂಧಿಯಾಗಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…