ಹುಣಸೂರು/ಮೈಸೂರು: ಸಾಕು ಪ್ರಾಣಿ ಹಾಗೂ ಜಾನುವಾರುಗಳನ್ನು ಹೊಂಚು ಹಾಕಿ ಕೊಂದು ಹಾಕುತ್ತಿದ್ದ ಸುಮಾರು 6 ವರ್ಷದ ಚಿರತೆ ಬೋನಿನಲ್ಲಿ ಬಂಧಿಯಾಗಿರುವ ಘಟನೆ ಹನಗೋಡಿನ ಕೊಡ್ಲೂರಿನಲ್ಲಿ ನಡೆದಿದೆ.
ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ನಾಯಿ, ಮೇಕೆ ಸೇರಿದಂತೆ ಸಾಕು ಪ್ರಾಣಿಗಳ ಕೊಂದು ಹೊತ್ತೊಯ್ಯುತ್ತಿತ್ತು. ಶನಿವಾರ(ಆ.4) ಗ್ರಾಮದ ವಿನ್ಸೆಂಟ್ ಅವರಿಗೆ ಸೇರಿದ ಜಮೀನಿಗೆ ನುಗ್ಗಿ ಕರುವನ್ನು ಕೊಂದು ಹಾಕಿತ್ತು. ವಿನ್ಸೆಂಟ್ ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಪ್ರಾದೇಶಿಕ ವಿಭಾಗದ ಆರ್.ಎಫ್.ಒ. ನಂದಕುಮಾರ್, ಡಿ.ಆರ್.ಎಫ್.ಒ. ಮಲ್ಲಿಕಾರ್ಜುನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬೋನು ಇರಿಸಿದ್ದರು. ಶನಿವಾರ ರಾತ್ರಿ ಬೋನಿನಲ್ಲಿರಿಸಿದ್ದ ನಾಯಿಯನ್ನು ತಿನ್ನುವ ಆಸೆಯಿಂದ ಒಳಹೊಕ್ಕಿದ್ದ ಚಿರತೆ ಬೋನಿನಲ್ಲಿ ಬಂಧಿಯಾಗಿದೆ.
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…