ಎಚ್.ಡಿ.ಕೋಟೆ: ಒಂಟಿ ಸಲಗವೊಂದು ಇಂದು ಮುಂಜಾನೆ ಗ್ರಾಮಕ್ಕೆ ನುಗಿ ದಾಂದಲೆ ಮಾಡಿರುವ ಘಟನೆ ತಾಲೂಕಿನ ಅಣ್ಣೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಳಿಗ್ಗೆ ಗ್ರಾಮದಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಗಾಬರಿಗೊಂಡರು. ಆನೆಯನ್ನು ಗ್ರಾಮದಿಂದ ಹೊರಗೆ ಕಳುಹಿಸಲು ಎಷ್ಟೇ ಪ್ರುಂತ್ನ ಪಟ್ಟರೂ ಕಾಡಾನೆ ಆ ರಸ್ತೆಯಿಂದ ಈ ರಸ್ತೆಗೆ, ಒಂದು ಹಿತ್ತಲಿನಿಂದ ಮತ್ತೊಂದು ಹಿತ್ತಲಿಗೆ ಓಡಾಡುತ್ತಾ ಬೆಳಿಗ್ಗೆ ೭ ಗಂಟೆವರೆಗೆ ಗ್ರಾಮದ ಪ್ರತಿಯೊಂದು ಬೀದಿಗಳಲ್ಲೂ ಓಡಾಡಿ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಸೃಷ್ಠಿ ಮಾಡಿತ್ತು.
ಈ ವೇಳೆ ಪ್ರಭು ಮತ್ತು ನಟೇಶ್ ಎಂಬವರ ಮನೆ ಪಕ್ಕದಲ್ಲಿ ನಿಲ್ಲಿಸಿದ ಬೈಕ್ ಅನ್ನು ಆನೆ ಜಖಂಗೊಳಿಸಿದೆ. ಗ್ರಾಮದ ನಿವಾಸಿಗಳು ಸಂಗ್ರಹಿಸಿದ್ದ ಹುಲ್ಲಿನ ಮೆದೆಯನ್ನು, ಸೌದೆಗಳನ್ನು ಚೆಲ್ಲಾಪಿಲ್ಲಿ ಮಾಡಿದೆ.
ಬಳಿಕ ಕಾಡಾನೆ ಗ್ರಾಮಕ್ಕೆ ನುಗ್ಗಿರುವ ವಿಚಾರ ಅರಣ್ಯ ಇಲಾಖೆಯವರಿಗೆ ತಿಳಿದು, ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಜೊತೆಗೂಡಿ ಸಮೀಪದ ವೀರನಹೊಸಳ್ಳಿ ಕಾಡಿನ ಪ್ರದೇಶಕ್ಕೆ ಆನೆಯನ್ನು ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…