ಎಚ್.ಡಿ.ಕೋಟೆ: ಒಂಟಿ ಸಲಗವೊಂದು ಇಂದು ಮುಂಜಾನೆ ಗ್ರಾಮಕ್ಕೆ ನುಗಿ ದಾಂದಲೆ ಮಾಡಿರುವ ಘಟನೆ ತಾಲೂಕಿನ ಅಣ್ಣೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಳಿಗ್ಗೆ ಗ್ರಾಮದಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಗಾಬರಿಗೊಂಡರು. ಆನೆಯನ್ನು ಗ್ರಾಮದಿಂದ ಹೊರಗೆ ಕಳುಹಿಸಲು ಎಷ್ಟೇ ಪ್ರುಂತ್ನ ಪಟ್ಟರೂ ಕಾಡಾನೆ ಆ ರಸ್ತೆಯಿಂದ ಈ ರಸ್ತೆಗೆ, ಒಂದು ಹಿತ್ತಲಿನಿಂದ ಮತ್ತೊಂದು ಹಿತ್ತಲಿಗೆ ಓಡಾಡುತ್ತಾ ಬೆಳಿಗ್ಗೆ ೭ ಗಂಟೆವರೆಗೆ ಗ್ರಾಮದ ಪ್ರತಿಯೊಂದು ಬೀದಿಗಳಲ್ಲೂ ಓಡಾಡಿ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಸೃಷ್ಠಿ ಮಾಡಿತ್ತು.
ಈ ವೇಳೆ ಪ್ರಭು ಮತ್ತು ನಟೇಶ್ ಎಂಬವರ ಮನೆ ಪಕ್ಕದಲ್ಲಿ ನಿಲ್ಲಿಸಿದ ಬೈಕ್ ಅನ್ನು ಆನೆ ಜಖಂಗೊಳಿಸಿದೆ. ಗ್ರಾಮದ ನಿವಾಸಿಗಳು ಸಂಗ್ರಹಿಸಿದ್ದ ಹುಲ್ಲಿನ ಮೆದೆಯನ್ನು, ಸೌದೆಗಳನ್ನು ಚೆಲ್ಲಾಪಿಲ್ಲಿ ಮಾಡಿದೆ.
ಬಳಿಕ ಕಾಡಾನೆ ಗ್ರಾಮಕ್ಕೆ ನುಗ್ಗಿರುವ ವಿಚಾರ ಅರಣ್ಯ ಇಲಾಖೆಯವರಿಗೆ ತಿಳಿದು, ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಜೊತೆಗೂಡಿ ಸಮೀಪದ ವೀರನಹೊಸಳ್ಳಿ ಕಾಡಿನ ಪ್ರದೇಶಕ್ಕೆ ಆನೆಯನ್ನು ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…