ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಮನವಿ ಮಾಡಿದ್ದಾರೆ.
ಖ್ಯಾತ ಗಾಯಕಿ ಎಸ್. ಜಾನಕಿಯವರ ಅಗಲಿಕೆ ಬಗ್ಗೆ ಅವರು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಈ ವೇಳೆ, ಜಾನಕಿ ಅಂದ್ರೆ ಸೀತೆ. ಸೀತೆ ಅಂದ್ರೆ ನಮಗೆ ಗೀತೆ. ಆಕೆಯ ಆಸೆ ಕರುನಾಡಿನಲ್ಲಿ ಇರೋದು. ನಾವು ಅದಕ್ಕೆ ಇಂಬು ಕೋಡೋದು ಬೇಡವೇ? ಅವರ ಸ್ಮಾರಕ ಆಗಬೇಕು. ಇದನ್ನು ಸಂಬಂಧಪಟ್ಟವರ ಗಮನಕ್ಕೆ ತರೋಣ ಎಂದು ಕರೆ ನೀಡಿದ್ದಾರೆ.
ಜಾನಕಿಯವರದ್ದು ಪರಿಪೂರ್ಣ ಜೀವನ, 88 ವರ್ಷ ಪೂರೈಸಿದ್ದಾರೆ. ಅವರು ದೇವರ ಭಕ್ತರು. ಸಂಗೀತ ಎಂಬುದು ದೇವರು, ಸಂಗೀತ ಎಲ್ಲಾ ದೇವರಿಗೆ ಪ್ರಿಯ. ಮೈಸೂರು ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ದೇವರ ಭಕ್ತರು. ಅವರಿಗೆ ಜಾನಕಿಯವರ ಸ್ಮಾರಕ ನಿರ್ಮಿಸುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿಯಲ್ಲಿ ಜು.11 ರಂದು ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಮಗ ಮೃತಪಟ್ಟ ಬಳಿಕ ಮೈಸೂರಿನ ಬೋಗಾದಿಯ ಆಪ್ತರ ಮನೆಯಲ್ಲಿ ಎಸ್.ಜಾನಕಿ ಅವರು ವಾಸವಾಗಿದ್ದರು.
80ರ ದಶಕದಲ್ಲಿ ʼಜಾನಕಮ್ಮʼ ಜನಪ್ರಿಯತೆ ಗಳಿಸಿದ್ದರು. ʼಭಾರತದ ನೈಟಿಂಗೇಲ್ʼ ಅಂತಲೇ ಹೆಸರುವಾಸಿಯಾಗಿದ್ದರು. ಸುಮಾರು 48 ಸಾವಿರ ಗೀತೆಗಳನ್ನು ಹಾಡಿದ್ದರು. ಆಂಧ್ರಪ್ರದೇಶದಲ್ಲಿ ಜನಿಸಿದ್ದರೂ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹೊಂದಿದ್ದರು. ಅಲ್ಲದೇ, ಕನ್ನಡದಲ್ಲೇ ಹೆಚ್ಚು ಹಾಡುಗಳನ್ನು ಹಾಡಿದ್ದರು. 4 ರಾಷ್ಟ್ರೀಯ ಪ್ರಶಸ್ತಿ, 33 ವಿವಿಧ ರಾಜ್ಯ ಪ್ರಶಸ್ತಿ, ಮೈಸೂರು ವಿವಿ ಗೌರವ ಡಾಕ್ಟರೇಟ್, ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.
ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…
ಫಾತಿಮಾ ರಲಿಯಾ ಯು ಟ್ಯೂಬ್ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್ಜಿಪಿಟಿಯ ಬಳಿ…
ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…