ಮೈಸೂರು

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಮನವಿ ಮಾಡಿದ್ದಾರೆ.

ಖ್ಯಾತ ಗಾಯಕಿ ಎಸ್‌. ಜಾನಕಿಯವರ ಅಗಲಿಕೆ ಬಗ್ಗೆ ಅವರು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಈ ವೇಳೆ, ಜಾನಕಿ ಅಂದ್ರೆ ಸೀತೆ. ಸೀತೆ ಅಂದ್ರೆ ನಮಗೆ ಗೀತೆ. ಆಕೆಯ ಆಸೆ ಕರುನಾಡಿನಲ್ಲಿ ಇರೋದು. ನಾವು ಅದಕ್ಕೆ ಇಂಬು ಕೋಡೋದು ಬೇಡವೇ? ಅವರ ಸ್ಮಾರಕ ಆಗಬೇಕು. ಇದನ್ನು ಸಂಬಂಧಪಟ್ಟವರ ಗಮನಕ್ಕೆ ತರೋಣ ಎಂದು ಕರೆ ನೀಡಿದ್ದಾರೆ.

ಜಾನಕಿಯವರದ್ದು ಪರಿಪೂರ್ಣ ಜೀವನ, 88 ವರ್ಷ ಪೂರೈಸಿದ್ದಾರೆ. ಅವರು ದೇವರ ಭಕ್ತರು. ಸಂಗೀತ ಎಂಬುದು ದೇವರು, ಸಂಗೀತ ಎಲ್ಲಾ ದೇವರಿಗೆ ಪ್ರಿಯ. ಮೈಸೂರು ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ದೇವರ ಭಕ್ತರು. ಅವರಿಗೆ ಜಾನಕಿಯವರ ಸ್ಮಾರಕ ನಿರ್ಮಿಸುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿಯಲ್ಲಿ ಜು.11 ರಂದು ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಮಗ ಮೃತಪಟ್ಟ ಬಳಿಕ ಮೈಸೂರಿನ ಬೋಗಾದಿಯ ಆಪ್ತರ ಮನೆಯಲ್ಲಿ ಎಸ್‌.ಜಾನಕಿ ಅವರು ವಾಸವಾಗಿದ್ದರು.

80ರ ದಶಕದಲ್ಲಿ ʼಜಾನಕಮ್ಮʼ ಜನಪ್ರಿಯತೆ ಗಳಿಸಿದ್ದರು. ʼಭಾರತದ ನೈಟಿಂಗೇಲ್‌ʼ ಅಂತಲೇ ಹೆಸರುವಾಸಿಯಾಗಿದ್ದರು. ಸುಮಾರು 48 ಸಾವಿರ ಗೀತೆಗಳನ್ನು ಹಾಡಿದ್ದರು. ಆಂಧ್ರಪ್ರದೇಶದಲ್ಲಿ ಜನಿಸಿದ್ದರೂ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹೊಂದಿದ್ದರು. ಅಲ್ಲದೇ, ಕನ್ನಡದಲ್ಲೇ ಹೆಚ್ಚು ಹಾಡುಗಳನ್ನು ಹಾಡಿದ್ದರು. 4 ರಾಷ್ಟ್ರೀಯ ಪ್ರಶಸ್ತಿ, 33 ವಿವಿಧ ರಾಜ್ಯ ಪ್ರಶಸ್ತಿ, ಮೈಸೂರು ವಿವಿ ಗೌರವ ಡಾಕ್ಟರೇಟ್‌, ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

1 hour ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

2 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

2 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

2 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

7 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

7 hours ago