ಮೈಸೂರು : ರಾಮಕೃಷ್ಣನಗರದಲ್ಲಿರುವ ಲಿಂಗಾಬುಧಿ ಕೆರೆ ಉದ್ಯಾನವನದಲ್ಲಿ ರೆಕ್ಕೆ-ಪುಕ್ಕದ ವತಿಯಿಂದ ಪಕ್ಷಿ ಪಿತಾಮಹ ಡಾ.ಸಲೀಂ ಆಲಿ ನೆನಪಿನಲ್ಲಿ ಆಯೋಜಿಸಿದ್ದ ಪಕ್ಷಿಗಳ ಅಪರೂಪದ ಛಾಯಾಚಿತ್ರ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು.
ಪ್ರದರ್ಶನದಲ್ಲಿ ೩೫೦ಕ್ಕೂ ಹೆಚ್ಚು ಪಕ್ಷಿಗಳ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿತ್ತು. ಒಂದೊಂದು ಪಕ್ಷಿಯ ಚಲನವಲನಗಳು, ಜೀವನ ಕ್ರಮಗಳನ್ನು ಛಾಯಾಚಿತ್ರಗಳು ಬಿಚ್ಚಿಟ್ಟವು. ಈ ಕಾರ್ಯಕ್ರಮವನ್ನು ಡಿಸಿಎಫ್ ಪರಮೇಶ್ ಉದ್ಘಾಟಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಅವರು, ಅರಣ್ಯಗಳು ನಶಿಸಿ ಹೋಗುತ್ತಿರುವುದರಿಂದ ಕೆಲವು ಪಕ್ಷಿಗಳು ಪ್ರಕೃತಿ ಯಿಂದ ದೂರವಾಗುತ್ತಿವೆ. ಅವುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಇಂತಹ ಕಾರ್ಯ ಚಟುವಟಿಕೆಗಳಿಂದ ಪಕ್ಷಿ ಸಂಕುಲ ಉಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಸಿಎಫ್ ರವಿಶಂಕರ್ ಮಾತನಾಡಿ, ಪ್ರಕೃತಿಯಲ್ಲಿ ನೋಡಬಹುದಾದ ಲಕ್ಷಾಂತರ ಪಕ್ಷಿಗಳಿವೆ. ಆದರೆ, ಅವುಗಳ ಸಂತತಿ ತೀರಾ ಕಡಿಮೆಯಾಗಿವೆ. ಮುಂದಿನ ಪೀಳಿಗೆಯವರಿಗೂ ಅವುಗಳನ್ನು ನೋಡಲು ಸಾಧ್ಯವಿಲ್ಲ. ಪಕ್ಷಿಗಳನ್ನು ರಕ್ಷಿಸದಿದ್ದರೆ ಕೇವಲ ಛಾಯಾಚಿತ್ರಗಳಲ್ಲಿ ಮಾತ್ರ ನೋಡಬೇಕಾದ ಸ್ಥಿತಿ ಉಂಟಾಗುತ್ತದೆ ಎಂದು ಹೇಳಿದರು.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…