ಮೈಸೂರು

ಪಕ್ಷಿಗಳ ಜೀವನ ಬಿಚ್ಚಿಟ್ಟ ಛಾಯಾಚಿತ್ರ ಪ್ರದರ್ಶನ.!

ಮೈಸೂರು : ರಾಮಕೃಷ್ಣನಗರದಲ್ಲಿರುವ ಲಿಂಗಾಬುಧಿ ಕೆರೆ ಉದ್ಯಾನವನದಲ್ಲಿ ರೆಕ್ಕೆ-ಪುಕ್ಕದ ವತಿಯಿಂದ ಪಕ್ಷಿ ಪಿತಾಮಹ ಡಾ.ಸಲೀಂ ಆಲಿ ನೆನಪಿನಲ್ಲಿ ಆಯೋಜಿಸಿದ್ದ ಪಕ್ಷಿಗಳ ಅಪರೂಪದ ಛಾಯಾಚಿತ್ರ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು.

ಪ್ರದರ್ಶನದಲ್ಲಿ ೩೫೦ಕ್ಕೂ ಹೆಚ್ಚು ಪಕ್ಷಿಗಳ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿತ್ತು. ಒಂದೊಂದು ಪಕ್ಷಿಯ ಚಲನವಲನಗಳು, ಜೀವನ ಕ್ರಮಗಳನ್ನು ಛಾಯಾಚಿತ್ರಗಳು ಬಿಚ್ಚಿಟ್ಟವು. ಈ ಕಾರ್ಯಕ್ರಮವನ್ನು ಡಿಸಿಎಫ್ ಪರಮೇಶ್ ಉದ್ಘಾಟಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಅವರು, ಅರಣ್ಯಗಳು ನಶಿಸಿ ಹೋಗುತ್ತಿರುವುದರಿಂದ ಕೆಲವು ಪಕ್ಷಿಗಳು ಪ್ರಕೃತಿ ಯಿಂದ ದೂರವಾಗುತ್ತಿವೆ. ಅವುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಇಂತಹ ಕಾರ್ಯ ಚಟುವಟಿಕೆಗಳಿಂದ ಪಕ್ಷಿ ಸಂಕುಲ ಉಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಿಎಫ್ ರವಿಶಂಕರ್ ಮಾತನಾಡಿ, ಪ್ರಕೃತಿಯಲ್ಲಿ ನೋಡಬಹುದಾದ ಲಕ್ಷಾಂತರ ಪಕ್ಷಿಗಳಿವೆ. ಆದರೆ, ಅವುಗಳ ಸಂತತಿ ತೀರಾ ಕಡಿಮೆಯಾಗಿವೆ. ಮುಂದಿನ ಪೀಳಿಗೆಯವರಿಗೂ ಅವುಗಳನ್ನು ನೋಡಲು ಸಾಧ್ಯವಿಲ್ಲ. ಪಕ್ಷಿಗಳನ್ನು ರಕ್ಷಿಸದಿದ್ದರೆ ಕೇವಲ ಛಾಯಾಚಿತ್ರಗಳಲ್ಲಿ ಮಾತ್ರ ನೋಡಬೇಕಾದ ಸ್ಥಿತಿ ಉಂಟಾಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago