ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ.
ಇಂದು ಬೆಳಿಗ್ಗೆಯಿಂದಲೂ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಇನ್ನು ದೇವಸ್ಥಾನಕ್ಕೆ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಂಜುಂಡೇಶ್ವರ ದೇವಸ್ಥಾನದ ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.
ದೇವಸ್ಥಾನದ ನದಿಯ ದಡದಲ್ಲಿದ್ದ ಬಸ್ ನಿಲ್ದಾಣವನ್ನು ಈಗ ಸಮೀಪದ ಮಾರ್ಗದಲ್ಲಿ ತಾತ್ಕಾಲಿಕ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.
ಬ್ಯಾರಿಕೇಡ್ ಅಳವಡಿಸಿ ಪೊಲೀಸರಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 300 ಮೀಟರ್ ಅಂತರದಲ್ಲಿ ತಾತ್ಕಾಲಿಕ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.
ಇಂದು ಸಂಜೆ ಹಾಗೂ ರಾತ್ರಿ ದೇವಸ್ಥಾನ ಆವರಣದಲ್ಲಿ ಹಲವು ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾತ್ರಿಯಿಡಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಕಾರಣ ನಿಲ್ದಾಣದಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ.
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…