ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ.
ಇಂದು ಬೆಳಿಗ್ಗೆಯಿಂದಲೂ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಇನ್ನು ದೇವಸ್ಥಾನಕ್ಕೆ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಂಜುಂಡೇಶ್ವರ ದೇವಸ್ಥಾನದ ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.
ದೇವಸ್ಥಾನದ ನದಿಯ ದಡದಲ್ಲಿದ್ದ ಬಸ್ ನಿಲ್ದಾಣವನ್ನು ಈಗ ಸಮೀಪದ ಮಾರ್ಗದಲ್ಲಿ ತಾತ್ಕಾಲಿಕ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.
ಬ್ಯಾರಿಕೇಡ್ ಅಳವಡಿಸಿ ಪೊಲೀಸರಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 300 ಮೀಟರ್ ಅಂತರದಲ್ಲಿ ತಾತ್ಕಾಲಿಕ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.
ಇಂದು ಸಂಜೆ ಹಾಗೂ ರಾತ್ರಿ ದೇವಸ್ಥಾನ ಆವರಣದಲ್ಲಿ ಹಲವು ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾತ್ರಿಯಿಡಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಕಾರಣ ನಿಲ್ದಾಣದಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…