Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ವರುಣಾದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ

ಮೈಸೂರು : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಮೈಸೂರಿನಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದೆ. ಅದರಲ್ಲೂ ಖದೀಮರು, ಮಲಗಿದ್ದ ಮಹಿಳೆಯ ಮಾಂಗಲ್ಯ ಸರವನ್ನೇ ಎಗರಿಸಿ ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ಕ್ಷೇತ್ರದ ರಾಂಪುರ ಗ್ರಾಮದಲ್ಲಿ ಒಂದೇ ರಾತ್ರಿ ಐದು ಕಡೆ ಸರಣಿ ಕಳ್ಳತನ ನಡೆದಿದೆ. ನಗದು ಮತ್ತು ಚಿನ್ನಾಭರಣ ದೋಚಿ ಖದೀಮರು ಪರಾರಿಯಾಗಿದ್ದಾರೆ. ಮನೆಯಲ್ಲಿ ಮಲಗಿದ್ದ ಶಿವಕುಮಾರ್ ಎಂಬುವವರ ಪತ್ನಿ ಭವಾನಿ ಅವರ ಮಾಂಗಲ್ಯ ಸರ ಕಳ್ಳತನವಾಗಿದೆ.

ಮನೆಯಲ್ಲಿ ಮಲಗಿರುವಾಗ ಬಾಗಿಲನ್ನು ಮೀಟಿ ಒಳಗೆ ಪ್ರವೇಶಿಸಿದ ಕಳ್ಳರು ಭವಾನಿಯವರ ಕತ್ತಿನಲ್ಲಿದ್ದ ಸುಮಾರು 1.50 ಲಕ್ಷ ರೂ. ಬೆಳೆಬಾಳುವ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮತ್ತೊಂದೆಡೆ ಸೋಮಪ್ಪ ಎಂಬುವವರ ಮನೆಯಲ್ಲಿ ಎರಡು ಕಬ್ಬಿಣದ ಪೆಟ್ಟಿಗೆಯಲ್ಲಿದ್ದ 5 ಗ್ರಾಂ ಮಾಂಗಲ್ಯ ಮತ್ತು 40 ಸಾವಿರ ಹಣ ಕಳ್ಳತನವಾಗಿದೆ. ಹಾಗೂ ಕಾಡಯ್ಯ ಮತ್ತು ರಾಜಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಗೇಂದ್ರ ಎಂಬುವರ ಪಂಪ್ ಹೌಸ್​ನಲ್ಲಿ ಬಾಗಿಲು ಮುರಿದು ಬೆಳೆಬಾಳುವ ವಸ್ತುಗಳನ್ನು ದೋಚಲಾಗಿದೆ. ಕಳ್ಳರನ್ನು ಬಂಧಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ