ಮೈಸೂರು

ವರುಣಾದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ

ಮೈಸೂರು : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಮೈಸೂರಿನಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದೆ. ಅದರಲ್ಲೂ ಖದೀಮರು, ಮಲಗಿದ್ದ ಮಹಿಳೆಯ ಮಾಂಗಲ್ಯ ಸರವನ್ನೇ ಎಗರಿಸಿ ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ಕ್ಷೇತ್ರದ ರಾಂಪುರ ಗ್ರಾಮದಲ್ಲಿ ಒಂದೇ ರಾತ್ರಿ ಐದು ಕಡೆ ಸರಣಿ ಕಳ್ಳತನ ನಡೆದಿದೆ. ನಗದು ಮತ್ತು ಚಿನ್ನಾಭರಣ ದೋಚಿ ಖದೀಮರು ಪರಾರಿಯಾಗಿದ್ದಾರೆ. ಮನೆಯಲ್ಲಿ ಮಲಗಿದ್ದ ಶಿವಕುಮಾರ್ ಎಂಬುವವರ ಪತ್ನಿ ಭವಾನಿ ಅವರ ಮಾಂಗಲ್ಯ ಸರ ಕಳ್ಳತನವಾಗಿದೆ.

ಮನೆಯಲ್ಲಿ ಮಲಗಿರುವಾಗ ಬಾಗಿಲನ್ನು ಮೀಟಿ ಒಳಗೆ ಪ್ರವೇಶಿಸಿದ ಕಳ್ಳರು ಭವಾನಿಯವರ ಕತ್ತಿನಲ್ಲಿದ್ದ ಸುಮಾರು 1.50 ಲಕ್ಷ ರೂ. ಬೆಳೆಬಾಳುವ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮತ್ತೊಂದೆಡೆ ಸೋಮಪ್ಪ ಎಂಬುವವರ ಮನೆಯಲ್ಲಿ ಎರಡು ಕಬ್ಬಿಣದ ಪೆಟ್ಟಿಗೆಯಲ್ಲಿದ್ದ 5 ಗ್ರಾಂ ಮಾಂಗಲ್ಯ ಮತ್ತು 40 ಸಾವಿರ ಹಣ ಕಳ್ಳತನವಾಗಿದೆ. ಹಾಗೂ ಕಾಡಯ್ಯ ಮತ್ತು ರಾಜಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಗೇಂದ್ರ ಎಂಬುವರ ಪಂಪ್ ಹೌಸ್​ನಲ್ಲಿ ಬಾಗಿಲು ಮುರಿದು ಬೆಳೆಬಾಳುವ ವಸ್ತುಗಳನ್ನು ದೋಚಲಾಗಿದೆ. ಕಳ್ಳರನ್ನು ಬಂಧಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

lokesh

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 hour ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 hour ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 hour ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 hour ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 hour ago