ಮೈಸೂರು

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವಿಜೃಂಭಣೆಯಿಂದ ಜರುಗಿದ ಚಿಕ್ಕಜಾತ್ರೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ಚಿಕ್ಕ ಜಾತ್ರಾ ಮಹೋತ್ಸವವು ಇಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.

ಜಾತ್ರೆಯ ಪ್ರಯುಕ್ತ ಬೆಳಿಗ್ಗೆ ಭಕ್ತರು 4 ಗಂಟೆಯಿಂದಲೇ ಕಪಿಲಾ ನದಿ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.

ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್‌ ನೇತೃತ್ವದಲ್ಲಿ ಅರ್ಚಕರು ಶ್ರೀ ಗಣಪತಿ, ಶ್ರೀ ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀ ನಂಜುಂಡೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರತಂದು ಮೊಗಸಾಲೆಯಲ್ಲಿರಿಸಿ ವಿದ್ಯುಕ್ತವಾಗಿ ಪೂಜೆ ಸಲ್ಲಿಸಿ ರಥದ ಸುತ್ತ ಪ್ರದಕ್ಷಿಣೆ ಹಾಕಿ 9.00 ರಿಂದ 9.30 ಗಂಟೆಗೆ ಸಲ್ಲುವ ಶುಭ ಧನುರ್‌ ಲಗ್ನದಲ್ಲಿ ಸರ್ವಾಲಂಕೃತ ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.

ಇದನ್ನು ಓದಿ: ಸರ್ಕಾರಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ

ಈ ವೇಳೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ರಥಧ ಚಕ್ರಗಳಿಗೆ ಈಡುಗಾಯಿ ಒಡೆದು ರಥೋತ್ಸವಕ್ಕೆ ಚಾಲನೆ ನೀಡಿದರು.

ಪಾರ್ವತಿ ಸಮೇತ ಶ್ರೀ ನಂಜುಂಡೇಶ್ವರಸ್ವಾಮಿ ಒಂದು ರಥದಲ್ಲಿ ಆಸೀನರಾಗಿದ್ದರೆ, ಗಣಪತಿ ಹಾಗೂ ಚಂಡಿಕೇಶ್ವರ ಸ್ವಾಮಿಯನ್ನು ಹೊತ್ತ ಪ್ರತ್ಯೇಕ ರಥಗಳು ರಥಬೀದಿಯಲ್ಲಿ ಸಂಚರಿಸಿದವು.

ವಿವಿಧ ಬಗೆಯ ಪುಷ್ಪಗಳು ಹಾಗೂ ಬಣ್ಣ ಬಣ್ಣದ ವಸ್ತ್ರಗಳಿಂದ ಅಲಂಕೃತಗೊಂಡಿದ್ದ ಮೂರು ರಥಗಳು ನೋಡುಗರ ಕಣ್ಮನ ಸೆಳೆದವು. ಜಾತ್ರೆಯ ಅಂಗವಾಗಿ ಮಜ್ಜಿಗೆ, ಪಾನಕ ಹಾಗೂ ತಿಂಡಿ ತಿನಿಸುಗಳನ್ನು ಪ್ರಸಾದದ ರೂಪದಲ್ಲಿ ದಾನಿಗಳು ಭಕ್ತರಿಗೆ ವಿತರಿಸಿದರು. ಇಂದು ಹುಣ್ಣಿಮೆಯ ಅಂಗವಾಗಿ ಚಿಕ್ಕ ಜಾತ್ರಾ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಥೋತ್ಸವವನ್ನು ಕಣ್ತುಂಬಿಕೊಂಡರು.

ಜಾತ್ರೆಯ ಅಂಗವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago