ನಂಜನಗೂಡು : ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಏ. 2ರಂದು ಬೆಳಗ್ಗೆ 6ರಿಂದ 6.40ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ಮಹಾ ಗೌತಮ ರಥಾರೋಹಣ ನೆರವೇರಲಿದ್ದು, ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಜಾತ್ರೆಯ ಮತ್ತೊಂದು ಪ್ರಮುಖ ಆಕರ್ಷಣೆಯಾದ ತೆಪ್ಪೋತ್ಸವ ಏ. 4ರಂದು ರಾತ್ರಿ 7 ಗಂಟೆಗೆ ಕಪಿಲಾ ನದಿಯಲ್ಲಿ ನಡೆಯಲಿದ್ದು, ತೆಪ್ಪೋತ್ಸವದಲ್ಲೂ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಯಿದೆ.
ಗೌತಮ ರಥದ ಆಕರ್ಷಣೆ : ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿಜರುಗುವ ದೊಡ್ಡಜಾತ್ರೆಯ ರಥೋತ್ಸವದಲ್ಲಿ ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಅವರು ಆಸೀನರಾಗಿರುವ 5 ಅಲಂಕೃತ ರಥಗಳು ಮೆರವಣಿಗೆಯಲ್ಲಿ ಸಾಗುತ್ತವೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವ ಶ್ರೀಕಂಠೇಶ್ವರಸ್ವಾಮಿ ಆಸೀನರಾಗುವ ಗೌತಮ ರಥ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಸುಮಾರು 10 ಅಡಿ ವ್ಯಾಸದ ಆರು ಬೃಹತ್ ಚಕ್ರಗಳನ್ನು ಒಳಗೊಂಡಿದೆ.
ನೆಲದಿಂದ ಸುಮಾರು 90 ಅಡಿ ಎತ್ತರದ ಬೃಹತ್ ರಥ ಅಂದಾಜು 110 ಟನ್ ತೂಕವನ್ನು ಹೊಂದಿದೆ. ಗೌತಮ ರಥದ ಉತ್ಸವ ಮಂಟಪ ವಿಶಿಷ್ಟ ಕಲಾ ಕೆತ್ತನೆಯಿಂದ ಕೂಡಿದ್ದು, ಜಾತ್ರೆ ಸಂದರ್ಭ ನಾನಾ ಬಣ್ಣಗಳ ವಸ್ತ್ರಗಳು, ವಿವಿಧ ಬಗೆಯ ಪುಷ್ಪಗಳು ಹಾಗೂ ಬಣ್ಣದ ಧ್ವಜಗಳನ್ನು ರಥಕ್ಕೆ ಕಟ್ಟಿ ಸಿಂಗರಿಸಲಾಗುತ್ತದೆ. 1.5 ಕಿ.ಮೀ ಉದ್ದದ ರಥಬೀದಿಯಲ್ಲಿ ಒಂದು ಸುತ್ತು ಐದೂ ರಥಗಳನ್ನು ಎಳೆಯುವ ಮೂಲಕ ಭಕ್ತಾಗಳು
ಸಂಭ್ರಮಿಸಲಿದ್ದಾರೆ ಜಾತ್ರೆಯ ಸಿದ್ಧತೆ : ಜಾತ್ರಾ ಮಹೋತ್ಸವದ ಪ್ರಯುಕ್ತ ಗೌತಮ ರಥ ಹಾಗೂ ಪಾರ್ವತಮ್ಮನವರು ಆಸೀನರಾಗುವ ಚಿಕ್ಕರಥದ ಗಾಲಿಗಳನ್ನು ದುರಸ್ತಿಪಡಿಸಿ ಐದೂ ರಥಗಳಿಗೆ ಬಣ್ಣ ಬಳಿಯಲಾಗಿದೆ. ಜೊತೆಗೆ ದೊಡ್ಡ ರಥವನ್ನು ಎಳೆಯಲು ನೆರವಾಗುವಂತೆ 300 ಅಡಿ ಉದ್ದದ ಬೃಹತ್ ಹಗ್ಗವನ್ನು ಖರೀದಿಸಿ ರಥಕ್ಕೆ ಅಳವಡಿಸಲಾಗಿದೆ.
ಇನ್ನು ಜಾತ್ರೆಗೆ ಲಕ್ಷಕ್ಕೂ ಹೆಚ್ಚು ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸುವ ಜೊತೆಗೆ ಜಾತ್ರೆಯ ಸಮಯದಲ್ಲಿ ಹೆಚ್ಚಿನ ಜನ ಸಂದಣಿ ಇರುವ ನದಿ ತೀರ, ದೇವಾಲಯದ ಆವರಣ, ದಾಸೋಹ ಭವನ ಇನ್ನಿತರ ಪ್ರದೇಶಗಳಲ್ಲಿ ಕಳ್ಳತನ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳು ಜರುಗದಂತೆ ಸಿಸಿ ಕ್ಯಾಮೆರಾ ಅಳವಡಿಸುವ ಕಾರ್ಯ ಪೂರ್ಣಗೊಂಡಿದೆ.
ಜನ ನಿಬಿಡ ಸ್ಥಳಗಳಲ್ಲಿ ಪೊಲೀಸ್ ವಾಚ್ ಟವರ್ಗಳನ್ನು ನಿರ್ಮಿಸಲಾಗಿದೆ. ಉಳಿದಂತೆ ಜಾತ್ರೆಯ ಸಲುವಾಗಿ ಆಗಮಿಸುವ ನಂಜನಗೂಡಿಗೆ ಆಗಮಿಸುವ ಭಕ್ತರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕೆಎಸ್ಆರ್ಟಿಸಿ ಮೂಲಕ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…