ಮೈಸೂರು

ಏ. 2 ರಂದು ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರೆ : ನಂಜನಗೂಡಿನಲ್ಲಿ ಹಬ್ಬದ ವಾತಾವರಣ

ನಂಜನಗೂಡು : ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಏ. 2ರಂದು ಬೆಳಗ್ಗೆ 6ರಿಂದ 6.40ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ಮಹಾ ಗೌತಮ ರಥಾರೋಹಣ ನೆರವೇರಲಿದ್ದು, ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಜಾತ್ರೆಯ ಮತ್ತೊಂದು ಪ್ರಮುಖ ಆಕರ್ಷಣೆಯಾದ ತೆಪ್ಪೋತ್ಸವ ಏ. 4ರಂದು ರಾತ್ರಿ 7 ಗಂಟೆಗೆ ಕಪಿಲಾ ನದಿಯಲ್ಲಿ ನಡೆಯಲಿದ್ದು, ತೆಪ್ಪೋತ್ಸವದಲ್ಲೂ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಯಿದೆ.

ಗೌತಮ ರಥದ ಆಕರ್ಷಣೆ : ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿಜರುಗುವ ದೊಡ್ಡಜಾತ್ರೆಯ ರಥೋತ್ಸವದಲ್ಲಿ ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಅವರು ಆಸೀನರಾಗಿರುವ 5 ಅಲಂಕೃತ ರಥಗಳು ಮೆರವಣಿಗೆಯಲ್ಲಿ ಸಾಗುತ್ತವೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವ ಶ್ರೀಕಂಠೇಶ್ವರಸ್ವಾಮಿ ಆಸೀನರಾಗುವ ಗೌತಮ ರಥ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಸುಮಾರು 10 ಅಡಿ ವ್ಯಾಸದ ಆರು ಬೃಹತ್‌ ಚಕ್ರಗಳನ್ನು ಒಳಗೊಂಡಿದೆ.

ನೆಲದಿಂದ ಸುಮಾರು 90 ಅಡಿ ಎತ್ತರದ ಬೃಹತ್‌ ರಥ ಅಂದಾಜು 110 ಟನ್‌ ತೂಕವನ್ನು ಹೊಂದಿದೆ. ಗೌತಮ ರಥದ ಉತ್ಸವ ಮಂಟಪ ವಿಶಿಷ್ಟ ಕಲಾ ಕೆತ್ತನೆಯಿಂದ ಕೂಡಿದ್ದು, ಜಾತ್ರೆ ಸಂದರ್ಭ ನಾನಾ ಬಣ್ಣಗಳ ವಸ್ತ್ರಗಳು, ವಿವಿಧ ಬಗೆಯ ಪುಷ್ಪಗಳು ಹಾಗೂ ಬಣ್ಣದ ಧ್ವಜಗಳನ್ನು ರಥಕ್ಕೆ ಕಟ್ಟಿ ಸಿಂಗರಿಸಲಾಗುತ್ತದೆ. 1.5 ಕಿ.ಮೀ ಉದ್ದದ ರಥಬೀದಿಯಲ್ಲಿ ಒಂದು ಸುತ್ತು ಐದೂ ರಥಗಳನ್ನು ಎಳೆಯುವ ಮೂಲಕ ಭಕ್ತಾಗಳು

ಸಂಭ್ರಮಿಸಲಿದ್ದಾರೆ ಜಾತ್ರೆಯ ಸಿದ್ಧತೆ : ಜಾತ್ರಾ ಮಹೋತ್ಸವದ ಪ್ರಯುಕ್ತ ಗೌತಮ ರಥ ಹಾಗೂ ಪಾರ್ವತಮ್ಮನವರು ಆಸೀನರಾಗುವ ಚಿಕ್ಕರಥದ ಗಾಲಿಗಳನ್ನು ದುರಸ್ತಿಪಡಿಸಿ ಐದೂ ರಥಗಳಿಗೆ ಬಣ್ಣ ಬಳಿಯಲಾಗಿದೆ. ಜೊತೆಗೆ ದೊಡ್ಡ ರಥವನ್ನು ಎಳೆಯಲು ನೆರವಾಗುವಂತೆ 300 ಅಡಿ ಉದ್ದದ ಬೃಹತ್‌ ಹಗ್ಗವನ್ನು ಖರೀದಿಸಿ ರಥಕ್ಕೆ ಅಳವಡಿಸಲಾಗಿದೆ.

ಇನ್ನು ಜಾತ್ರೆಗೆ ಲಕ್ಷಕ್ಕೂ ಹೆಚ್ಚು ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸುವ ಜೊತೆಗೆ ಜಾತ್ರೆಯ ಸಮಯದಲ್ಲಿ ಹೆಚ್ಚಿನ ಜನ ಸಂದಣಿ ಇರುವ ನದಿ ತೀರ, ದೇವಾಲಯದ ಆವರಣ, ದಾಸೋಹ ಭವನ ಇನ್ನಿತರ ಪ್ರದೇಶಗಳಲ್ಲಿ ಕಳ್ಳತನ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳು ಜರುಗದಂತೆ ಸಿಸಿ ಕ್ಯಾಮೆರಾ ಅಳವಡಿಸುವ ಕಾರ‍್ಯ ಪೂರ್ಣಗೊಂಡಿದೆ.

ಜನ ನಿಬಿಡ ಸ್ಥಳಗಳಲ್ಲಿ ಪೊಲೀಸ್‌ ವಾಚ್‌ ಟವರ್‌ಗಳನ್ನು ನಿರ್ಮಿಸಲಾಗಿದೆ. ಉಳಿದಂತೆ ಜಾತ್ರೆಯ ಸಲುವಾಗಿ ಆಗಮಿಸುವ ನಂಜನಗೂಡಿಗೆ ಆಗಮಿಸುವ ಭಕ್ತರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕೆಎಸ್‌ಆರ್‌ಟಿಸಿ ಮೂಲಕ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

lokesh

Recent Posts

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

58 mins ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

6 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

23 hours ago