ಮೈಸೂರು

ಏ. 2 ರಂದು ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರೆ : ನಂಜನಗೂಡಿನಲ್ಲಿ ಹಬ್ಬದ ವಾತಾವರಣ

ನಂಜನಗೂಡು : ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಏ. 2ರಂದು ಬೆಳಗ್ಗೆ 6ರಿಂದ 6.40ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ಮಹಾ ಗೌತಮ ರಥಾರೋಹಣ ನೆರವೇರಲಿದ್ದು, ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಜಾತ್ರೆಯ ಮತ್ತೊಂದು ಪ್ರಮುಖ ಆಕರ್ಷಣೆಯಾದ ತೆಪ್ಪೋತ್ಸವ ಏ. 4ರಂದು ರಾತ್ರಿ 7 ಗಂಟೆಗೆ ಕಪಿಲಾ ನದಿಯಲ್ಲಿ ನಡೆಯಲಿದ್ದು, ತೆಪ್ಪೋತ್ಸವದಲ್ಲೂ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಯಿದೆ.

ಗೌತಮ ರಥದ ಆಕರ್ಷಣೆ : ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿಜರುಗುವ ದೊಡ್ಡಜಾತ್ರೆಯ ರಥೋತ್ಸವದಲ್ಲಿ ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಅವರು ಆಸೀನರಾಗಿರುವ 5 ಅಲಂಕೃತ ರಥಗಳು ಮೆರವಣಿಗೆಯಲ್ಲಿ ಸಾಗುತ್ತವೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವ ಶ್ರೀಕಂಠೇಶ್ವರಸ್ವಾಮಿ ಆಸೀನರಾಗುವ ಗೌತಮ ರಥ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಸುಮಾರು 10 ಅಡಿ ವ್ಯಾಸದ ಆರು ಬೃಹತ್‌ ಚಕ್ರಗಳನ್ನು ಒಳಗೊಂಡಿದೆ.

ನೆಲದಿಂದ ಸುಮಾರು 90 ಅಡಿ ಎತ್ತರದ ಬೃಹತ್‌ ರಥ ಅಂದಾಜು 110 ಟನ್‌ ತೂಕವನ್ನು ಹೊಂದಿದೆ. ಗೌತಮ ರಥದ ಉತ್ಸವ ಮಂಟಪ ವಿಶಿಷ್ಟ ಕಲಾ ಕೆತ್ತನೆಯಿಂದ ಕೂಡಿದ್ದು, ಜಾತ್ರೆ ಸಂದರ್ಭ ನಾನಾ ಬಣ್ಣಗಳ ವಸ್ತ್ರಗಳು, ವಿವಿಧ ಬಗೆಯ ಪುಷ್ಪಗಳು ಹಾಗೂ ಬಣ್ಣದ ಧ್ವಜಗಳನ್ನು ರಥಕ್ಕೆ ಕಟ್ಟಿ ಸಿಂಗರಿಸಲಾಗುತ್ತದೆ. 1.5 ಕಿ.ಮೀ ಉದ್ದದ ರಥಬೀದಿಯಲ್ಲಿ ಒಂದು ಸುತ್ತು ಐದೂ ರಥಗಳನ್ನು ಎಳೆಯುವ ಮೂಲಕ ಭಕ್ತಾಗಳು

ಸಂಭ್ರಮಿಸಲಿದ್ದಾರೆ ಜಾತ್ರೆಯ ಸಿದ್ಧತೆ : ಜಾತ್ರಾ ಮಹೋತ್ಸವದ ಪ್ರಯುಕ್ತ ಗೌತಮ ರಥ ಹಾಗೂ ಪಾರ್ವತಮ್ಮನವರು ಆಸೀನರಾಗುವ ಚಿಕ್ಕರಥದ ಗಾಲಿಗಳನ್ನು ದುರಸ್ತಿಪಡಿಸಿ ಐದೂ ರಥಗಳಿಗೆ ಬಣ್ಣ ಬಳಿಯಲಾಗಿದೆ. ಜೊತೆಗೆ ದೊಡ್ಡ ರಥವನ್ನು ಎಳೆಯಲು ನೆರವಾಗುವಂತೆ 300 ಅಡಿ ಉದ್ದದ ಬೃಹತ್‌ ಹಗ್ಗವನ್ನು ಖರೀದಿಸಿ ರಥಕ್ಕೆ ಅಳವಡಿಸಲಾಗಿದೆ.

ಇನ್ನು ಜಾತ್ರೆಗೆ ಲಕ್ಷಕ್ಕೂ ಹೆಚ್ಚು ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸುವ ಜೊತೆಗೆ ಜಾತ್ರೆಯ ಸಮಯದಲ್ಲಿ ಹೆಚ್ಚಿನ ಜನ ಸಂದಣಿ ಇರುವ ನದಿ ತೀರ, ದೇವಾಲಯದ ಆವರಣ, ದಾಸೋಹ ಭವನ ಇನ್ನಿತರ ಪ್ರದೇಶಗಳಲ್ಲಿ ಕಳ್ಳತನ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳು ಜರುಗದಂತೆ ಸಿಸಿ ಕ್ಯಾಮೆರಾ ಅಳವಡಿಸುವ ಕಾರ‍್ಯ ಪೂರ್ಣಗೊಂಡಿದೆ.

ಜನ ನಿಬಿಡ ಸ್ಥಳಗಳಲ್ಲಿ ಪೊಲೀಸ್‌ ವಾಚ್‌ ಟವರ್‌ಗಳನ್ನು ನಿರ್ಮಿಸಲಾಗಿದೆ. ಉಳಿದಂತೆ ಜಾತ್ರೆಯ ಸಲುವಾಗಿ ಆಗಮಿಸುವ ನಂಜನಗೂಡಿಗೆ ಆಗಮಿಸುವ ಭಕ್ತರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕೆಎಸ್‌ಆರ್‌ಟಿಸಿ ಮೂಲಕ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

lokesh

Recent Posts

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

15 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

58 mins ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

1 hour ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

10 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

10 hours ago