ನಂಜನಗೂಡು : ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಏ. 2ರಂದು ಬೆಳಗ್ಗೆ 6ರಿಂದ 6.40ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ಮಹಾ ಗೌತಮ ರಥಾರೋಹಣ ನೆರವೇರಲಿದ್ದು, ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಜಾತ್ರೆಯ ಮತ್ತೊಂದು ಪ್ರಮುಖ ಆಕರ್ಷಣೆಯಾದ ತೆಪ್ಪೋತ್ಸವ ಏ. 4ರಂದು ರಾತ್ರಿ 7 ಗಂಟೆಗೆ ಕಪಿಲಾ ನದಿಯಲ್ಲಿ ನಡೆಯಲಿದ್ದು, ತೆಪ್ಪೋತ್ಸವದಲ್ಲೂ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಯಿದೆ.
ಗೌತಮ ರಥದ ಆಕರ್ಷಣೆ : ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿಜರುಗುವ ದೊಡ್ಡಜಾತ್ರೆಯ ರಥೋತ್ಸವದಲ್ಲಿ ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಅವರು ಆಸೀನರಾಗಿರುವ 5 ಅಲಂಕೃತ ರಥಗಳು ಮೆರವಣಿಗೆಯಲ್ಲಿ ಸಾಗುತ್ತವೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವ ಶ್ರೀಕಂಠೇಶ್ವರಸ್ವಾಮಿ ಆಸೀನರಾಗುವ ಗೌತಮ ರಥ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಸುಮಾರು 10 ಅಡಿ ವ್ಯಾಸದ ಆರು ಬೃಹತ್ ಚಕ್ರಗಳನ್ನು ಒಳಗೊಂಡಿದೆ.
ನೆಲದಿಂದ ಸುಮಾರು 90 ಅಡಿ ಎತ್ತರದ ಬೃಹತ್ ರಥ ಅಂದಾಜು 110 ಟನ್ ತೂಕವನ್ನು ಹೊಂದಿದೆ. ಗೌತಮ ರಥದ ಉತ್ಸವ ಮಂಟಪ ವಿಶಿಷ್ಟ ಕಲಾ ಕೆತ್ತನೆಯಿಂದ ಕೂಡಿದ್ದು, ಜಾತ್ರೆ ಸಂದರ್ಭ ನಾನಾ ಬಣ್ಣಗಳ ವಸ್ತ್ರಗಳು, ವಿವಿಧ ಬಗೆಯ ಪುಷ್ಪಗಳು ಹಾಗೂ ಬಣ್ಣದ ಧ್ವಜಗಳನ್ನು ರಥಕ್ಕೆ ಕಟ್ಟಿ ಸಿಂಗರಿಸಲಾಗುತ್ತದೆ. 1.5 ಕಿ.ಮೀ ಉದ್ದದ ರಥಬೀದಿಯಲ್ಲಿ ಒಂದು ಸುತ್ತು ಐದೂ ರಥಗಳನ್ನು ಎಳೆಯುವ ಮೂಲಕ ಭಕ್ತಾಗಳು
ಸಂಭ್ರಮಿಸಲಿದ್ದಾರೆ ಜಾತ್ರೆಯ ಸಿದ್ಧತೆ : ಜಾತ್ರಾ ಮಹೋತ್ಸವದ ಪ್ರಯುಕ್ತ ಗೌತಮ ರಥ ಹಾಗೂ ಪಾರ್ವತಮ್ಮನವರು ಆಸೀನರಾಗುವ ಚಿಕ್ಕರಥದ ಗಾಲಿಗಳನ್ನು ದುರಸ್ತಿಪಡಿಸಿ ಐದೂ ರಥಗಳಿಗೆ ಬಣ್ಣ ಬಳಿಯಲಾಗಿದೆ. ಜೊತೆಗೆ ದೊಡ್ಡ ರಥವನ್ನು ಎಳೆಯಲು ನೆರವಾಗುವಂತೆ 300 ಅಡಿ ಉದ್ದದ ಬೃಹತ್ ಹಗ್ಗವನ್ನು ಖರೀದಿಸಿ ರಥಕ್ಕೆ ಅಳವಡಿಸಲಾಗಿದೆ.
ಇನ್ನು ಜಾತ್ರೆಗೆ ಲಕ್ಷಕ್ಕೂ ಹೆಚ್ಚು ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸುವ ಜೊತೆಗೆ ಜಾತ್ರೆಯ ಸಮಯದಲ್ಲಿ ಹೆಚ್ಚಿನ ಜನ ಸಂದಣಿ ಇರುವ ನದಿ ತೀರ, ದೇವಾಲಯದ ಆವರಣ, ದಾಸೋಹ ಭವನ ಇನ್ನಿತರ ಪ್ರದೇಶಗಳಲ್ಲಿ ಕಳ್ಳತನ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳು ಜರುಗದಂತೆ ಸಿಸಿ ಕ್ಯಾಮೆರಾ ಅಳವಡಿಸುವ ಕಾರ್ಯ ಪೂರ್ಣಗೊಂಡಿದೆ.
ಜನ ನಿಬಿಡ ಸ್ಥಳಗಳಲ್ಲಿ ಪೊಲೀಸ್ ವಾಚ್ ಟವರ್ಗಳನ್ನು ನಿರ್ಮಿಸಲಾಗಿದೆ. ಉಳಿದಂತೆ ಜಾತ್ರೆಯ ಸಲುವಾಗಿ ಆಗಮಿಸುವ ನಂಜನಗೂಡಿಗೆ ಆಗಮಿಸುವ ಭಕ್ತರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕೆಎಸ್ಆರ್ಟಿಸಿ ಮೂಲಕ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…