ನಂಜನಗೂಡು : ಹುಲಿಯೊಂದು ಹಸುವನ್ನು ಕೊಂದು ದನಗಾಹಿಯ ಮೇಲೆ ದಾಳಿ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ಹಡೆಯಾಲ ಬಳಿಯ ಮಹದೇವ ನಗರ ಗ್ರಾಮದಲ್ಲಿ ನಡೆದಿದೆ.
ಹುಲಿ ದಾಳಿಗೆ ಸಿಲುಕಿದ ಮಹದೇವ ನಗರ ಗ್ರಾಮದ ನಿವಾಸಿ ವೀರಭದ್ರ. ಭೋವಿ (70) ಅಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಮಹದೇವ ನಗರ ಗ್ರಾಮದ ಸಮೀಪವಿರುವ ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ಅರಣ್ಯ ವ್ಯಾಪ್ತಿಗೆ ಸೇರಿದ ಮತ್ತಿ ಮರದ ಜೇನುಕಟ್ಟೆ ಬಳಿ ಜಾನುವಾರು ಮೇಯಿಸುತ್ತಿದ್ದ ದನಗಾಯಿ ವೀರಭದ್ರ ಬೋವಿ ಜಾನುವಾರುಗಳನ್ನು ಮೇಯಿಸುತ್ತಿರುವ ಸಂದರ್ಭದಲ್ಲಿ ಹುಲಿ ಏಕಾಏಕಿ ದಾಳಿ ಮಾಡಿದೆ.
ವೀರಭದ್ರ ಬೋವಿ ಅವರ ಹಸುವನ್ನು ಕೊಂದು ರಕ್ತ ಹೀರುತ್ತಿರುವ ಸಂದರ್ಭದಲ್ಲಿ ತನ್ನ ಜಾನುವಾರವನ್ನು ರಕ್ಷಿಸಲು ಚಿರಾಟ ನಡೆಸಿ ಹತ್ತಿರ ತೆರಳಿದ ಸಂದರ್ಭದಲ್ಲಿ ನರಭಕ್ಷಕ ಹುಲಿ ವೀರಭದ್ರ ಬೋವಿಯ ಮೇಲೆ ದಾಳಿ ಮಾಡಿದೆ
ಹುಲಿಯಿಂದ ಗಂಭೀರ ಗಾಯಗೊಂಡಿರುವ ವೀರಭದ್ರ ಬೋವಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ರವಾನಿಸಲಾಗಿದೆ
ಸ್ಥಳಕ್ಕೆ ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…