ಮೈಸೂರು : ನಂಜನಗೂಡು ತಾಲೂಕಿನ ಮುಳ್ಳೂರು ಸಮೀಪದ ಬೆಣ್ಣೆಗೆರೆಯ ರಾಜಶೇಖರ್ ಎಂಬವರನ್ನು ಬಲಿ ಪಡೆದಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುವ ವೇಳೆಯೇ ಮುಳ್ಳೂರಿನಿಂದ ಸುಮಾರು 10 ಕಿ.ಮೀ. ದೂರದ ಹೀರೇಗೌಡನಹುಂಡಿ ಸಮೀಪ ಜಮೀನಿನಲ್ಲಿ ಹುಲಿಯೊಂದು ಪತ್ತೆಯಾಗಿದ್ದು, ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ರಾಜಶೇಖರ್ ಅವರನ್ನು ಬಲಿ ಪಡೆದಿದ್ದ ಹುಲಿಯ ಸೆರೆಗೆ ಮಂಗಳವಾರವೂ ರೋಹಿತಾ, ಭೀಮಾ, ಮಹೇಂದ್ರ ಸಾಕಾನೆಗಳ ಮೂಲಕ ಬಂಡೀಪುರ ಅರಣ್ಯ ವ್ಯಾಪ್ತಿಯ ನುಗು, ಕಲ್ಕರೆ, ಯಡಿಯಾಲ ಉಪ ವಿಭಾಗದ ಸುಮಾರು 130ಕ್ಕೂ ಅಧಿಕ ಸಿಬ್ಬಂದಿ ಕೂಂಬಿಂಗ್ ಆರಂಭಿಸಿ ಹಂತಕ ಹುಲಿಗಾಗಿ ತೀವ್ರಶೋಧ ನಡೆಸುತ್ತಿರುವಾಗಲೇ, ಬೆಳಗ್ಗೆ ಸುಮಾರು 11 ಗಂಟೆಗೆ ವೇಳೆಗೆ ಸಮೀಪದ ಹೀರೇಗೌಡನ ಹುಂಡಿ ಬಳಿ ಸತೀಶ್ ಎಂಬವರ ಜಮೀನಿನಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಈ ಬಗ್ಗೆ ಸ್ಥಳೀಯ ರೈತರು ನೀಡಿದ ಖಚಿತ ಮಾಹಿತಿ ಮೇರೆಗೆ ಕೂಡಲೇ ಸಾಕಾನೆಗಳನ್ನು ಸ್ಥಳಕ್ಕೆ ಕರೆತಂದ ಅರಣ್ಯ ಇಲಾಖೆ ಹುಲಿಗಾಗಿ ಶೋಧ ಆರಂಭಿಸಿದೆ. ಬಳಿಕ ಹುಲಿ ಚಲನವಲನಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹುಲಿಯು ಸಂಜೆ ಸುಮಾರು 6 ಗಂಟೆ ವೇಳೆ ಹುಲಿಯು ಸಮೀಪದ ಹನುಮಂತನಗರ ಎಂಬಲ್ಲಿ ಪತ್ತೆಯಾಗಿರುವ ಖಚಿತ ಮಾಹಿತಿ ಮಾಹಿತಿ ಮೇರೆಗೆ ಸಾಕಾನೆ ಮೂಲಕ ತೆರಳಿದ ಡಾ.ರಮೇಶ್ ಹಾಗೂ ಡಾ.ವಸೀಂ ಮಿರ್ಜಾ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.
ಸದ್ಯ ಸೆರೆಯಾಗಿರುವ ಹುಲಿ ಸುಮಾರು 6 ವರ್ಷದ ಹೆಣ್ಣು ಹುಲಿಯಾಗಿದ್ದು, ಹುಲಿಯು ಯಾವುದೇ ಗಾಯವಿಲ್ಲದೆ ಆರೋಗ್ಯಕರವಾಗಿದೆ ಎಂದು ಅರಣ್ಯ ಇಲಾಖೆ ಖಚಿತಪಡಿಸಿದೆ.
ಸ್ಥಳಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ ಭೇಟಿ:
ಇದೇ ವೇಳೆ ಮಂಗಳವಾರ ಬೆಳಗ್ಗೆ ಮುಳ್ಳೂರಿಗೆ ಭೇಟಿ ನೀಡಿದ ನಂಜನಗೂಡು ಶಾಸಕ ದರ್ಶನ್ ಧ್ರುವ ನಾರಾಯಣ ರೈತರೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರೈತನ ಮೇಲೆ ಹುಲಿ ದಾಳಿಯಾಗಿರುವ ದುಃಖಕರ ವಿಚಾರ. ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದ್ದು, ಸ್ಥಳೀಯರು ಅದಕ್ಕೆ ಸಹಕಾರ ನೀಡಬೇಕು. ಯಾರೂ ಆತಂಕಕ್ಕೊಳಗಾಗುವುದು ಬೇಡ. ಮಾನವ ಪ್ರಾಣಿ ಸಂಘರ್ಷಕ್ಕೆ ಕಡಿವಾಣ ಹಾಕಲು ಕ್ರಮಕೈಗೊಳ್ಳಲಾಗುವುದು. ದಾಳಿಗೊಳಗಾದ ರೈತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದರು.
ಪ್ರಸ್ತುತ ಸೆರೆಯಾದ ಹುಲಿ ಭಾನುವಾರ ರೈತನ ಮೇಲೆ ದಾಳಿ ಮಾಡಿ ಬಲಿ ಪಡೆದ ಹುಲಿಯೋ ಅಥವಾ ಇದು ಬೇರೆ ಹುಲಿಯೋ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಆಂದೋಲನ ಪತ್ರಿಕೆಗೆ ಮಾಹಿತಿ ನೀಡಿದರು
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…