ಮೈಸೂರು

ಮುಳ್ಳೂರು ಸಮೀಪದ ಹೀರೇಗೌಡನಹುಂಡಿಯಲ್ಲಿ ಹುಲಿ ಸೆರೆ

ಮೈಸೂರು : ನಂಜನಗೂಡು ತಾಲೂಕಿನ ಮುಳ್ಳೂರು ಸಮೀಪದ ಬೆಣ್ಣೆಗೆರೆಯ ರಾಜಶೇಖರ್ ಎಂಬವರನ್ನು ಬಲಿ ಪಡೆದಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುವ ವೇಳೆಯೇ ಮುಳ್ಳೂರಿನಿಂದ ಸುಮಾರು 10 ಕಿ.ಮೀ. ದೂರದ ಹೀರೇಗೌಡನಹುಂಡಿ ಸಮೀಪ ಜಮೀನಿನಲ್ಲಿ ಹುಲಿಯೊಂದು ಪತ್ತೆಯಾಗಿದ್ದು, ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ರಾಜಶೇಖರ್ ಅವರನ್ನು ಬಲಿ ಪಡೆದಿದ್ದ ಹುಲಿಯ ಸೆರೆಗೆ ಮಂಗಳವಾರವೂ ರೋಹಿತಾ, ಭೀಮಾ, ಮಹೇಂದ್ರ ಸಾಕಾನೆಗಳ ಮೂಲಕ ಬಂಡೀಪುರ ಅರಣ್ಯ ವ್ಯಾಪ್ತಿಯ ನುಗು, ಕಲ್ಕರೆ, ಯಡಿಯಾಲ ಉಪ ವಿಭಾಗದ ಸುಮಾರು 130ಕ್ಕೂ ಅಧಿಕ ಸಿಬ್ಬಂದಿ ಕೂಂಬಿಂಗ್ ಆರಂಭಿಸಿ ಹಂತಕ ಹುಲಿಗಾಗಿ ತೀವ್ರಶೋಧ ನಡೆಸುತ್ತಿರುವಾಗಲೇ, ಬೆಳಗ್ಗೆ ಸುಮಾರು 11 ಗಂಟೆಗೆ ವೇಳೆಗೆ ಸಮೀಪದ ಹೀರೇಗೌಡನ ಹುಂಡಿ ಬಳಿ ಸತೀಶ್ ಎಂಬವರ ಜಮೀನಿನಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಈ ಬಗ್ಗೆ ಸ್ಥಳೀಯ ರೈತರು ನೀಡಿದ ಖಚಿತ ಮಾಹಿತಿ ಮೇರೆಗೆ ಕೂಡಲೇ ಸಾಕಾನೆಗಳನ್ನು ಸ್ಥಳಕ್ಕೆ ಕರೆತಂದ ಅರಣ್ಯ ಇಲಾಖೆ ಹುಲಿಗಾಗಿ ಶೋಧ ಆರಂಭಿಸಿದೆ. ಬಳಿಕ ಹುಲಿ ಚಲನವಲನಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹುಲಿಯು ಸಂಜೆ ಸುಮಾರು 6 ಗಂಟೆ ವೇಳೆ ಹುಲಿಯು ಸಮೀಪದ ಹನುಮಂತನಗರ ಎಂಬಲ್ಲಿ ಪತ್ತೆಯಾಗಿರುವ ಖಚಿತ ಮಾಹಿತಿ ಮಾಹಿತಿ ಮೇರೆಗೆ ಸಾಕಾನೆ ಮೂಲಕ ತೆರಳಿದ ಡಾ.ರಮೇಶ್ ಹಾಗೂ ಡಾ.ವಸೀಂ ಮಿರ್ಜಾ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.

ಸದ್ಯ ಸೆರೆಯಾಗಿರುವ ಹುಲಿ ಸುಮಾರು 6 ವರ್ಷದ ಹೆಣ್ಣು ಹುಲಿಯಾಗಿದ್ದು, ಹುಲಿಯು ಯಾವುದೇ ಗಾಯವಿಲ್ಲದೆ ಆರೋಗ್ಯಕರವಾಗಿದೆ ಎಂದು ಅರಣ್ಯ ಇಲಾಖೆ ಖಚಿತಪಡಿಸಿದೆ.

ಸ್ಥಳಕ್ಕೆ ಶಾಸಕ  ದರ್ಶನ್ ಧ್ರುವನಾರಾಯಣ ಭೇಟಿ:

ಇದೇ ವೇಳೆ ಮಂಗಳವಾರ ಬೆಳಗ್ಗೆ ಮುಳ್ಳೂರಿಗೆ ಭೇಟಿ ನೀಡಿದ ನಂಜನಗೂಡು ಶಾಸಕ ದರ್ಶನ್ ಧ್ರುವ ನಾರಾಯಣ ರೈತರೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರೈತನ ಮೇಲೆ ಹುಲಿ ದಾಳಿಯಾಗಿರುವ ದುಃಖಕರ ವಿಚಾರ. ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದ್ದು, ಸ್ಥಳೀಯರು ಅದಕ್ಕೆ ಸಹಕಾರ ನೀಡಬೇಕು. ಯಾರೂ ಆತಂಕಕ್ಕೊಳಗಾಗುವುದು ಬೇಡ. ಮಾನವ ಪ್ರಾಣಿ ಸಂಘರ್ಷಕ್ಕೆ ಕಡಿವಾಣ ಹಾಕಲು ಕ್ರಮಕೈಗೊಳ್ಳಲಾಗುವುದು. ದಾಳಿಗೊಳಗಾದ ರೈತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದರು.

ಪ್ರಸ್ತುತ ಸೆರೆಯಾದ ಹುಲಿ ಭಾನುವಾರ ರೈತನ ಮೇಲೆ ದಾಳಿ ಮಾಡಿ ಬಲಿ ಪಡೆದ ಹುಲಿಯೋ ಅಥವಾ ಇದು ಬೇರೆ ಹುಲಿಯೋ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಆಂದೋಲನ ಪತ್ರಿಕೆಗೆ ಮಾಹಿತಿ ನೀಡಿದರು

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

9 mins ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

24 mins ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

32 mins ago

17ಬಾರಿ ಬಜೆಟ್‌ ಮಂಡಿಸಿ ಮೈಸೂರಿಗೆ ಏನು ಮಾಡಿದ್ದೀರಿ? ; ಸಿಎಂಗೆ ಪ್ರತಾಪ್‌ ಸಿಂಹ ಪ್ರಶ್ನೆ

ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ…

40 mins ago

ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಂದ ದೂರವಿರಿ : ಕಮಿಷನರ್‌ ಸೀಮಾ ಲಾಟ್ಕರ್‌

ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…

1 hour ago

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

2 hours ago