ಮೈಸೂರು

ಮುಳ್ಳೂರು ಸಮೀಪದ ಹೀರೇಗೌಡನಹುಂಡಿಯಲ್ಲಿ ಹುಲಿ ಸೆರೆ

ಮೈಸೂರು : ನಂಜನಗೂಡು ತಾಲೂಕಿನ ಮುಳ್ಳೂರು ಸಮೀಪದ ಬೆಣ್ಣೆಗೆರೆಯ ರಾಜಶೇಖರ್ ಎಂಬವರನ್ನು ಬಲಿ ಪಡೆದಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುವ ವೇಳೆಯೇ ಮುಳ್ಳೂರಿನಿಂದ ಸುಮಾರು 10 ಕಿ.ಮೀ. ದೂರದ ಹೀರೇಗೌಡನಹುಂಡಿ ಸಮೀಪ ಜಮೀನಿನಲ್ಲಿ ಹುಲಿಯೊಂದು ಪತ್ತೆಯಾಗಿದ್ದು, ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ರಾಜಶೇಖರ್ ಅವರನ್ನು ಬಲಿ ಪಡೆದಿದ್ದ ಹುಲಿಯ ಸೆರೆಗೆ ಮಂಗಳವಾರವೂ ರೋಹಿತಾ, ಭೀಮಾ, ಮಹೇಂದ್ರ ಸಾಕಾನೆಗಳ ಮೂಲಕ ಬಂಡೀಪುರ ಅರಣ್ಯ ವ್ಯಾಪ್ತಿಯ ನುಗು, ಕಲ್ಕರೆ, ಯಡಿಯಾಲ ಉಪ ವಿಭಾಗದ ಸುಮಾರು 130ಕ್ಕೂ ಅಧಿಕ ಸಿಬ್ಬಂದಿ ಕೂಂಬಿಂಗ್ ಆರಂಭಿಸಿ ಹಂತಕ ಹುಲಿಗಾಗಿ ತೀವ್ರಶೋಧ ನಡೆಸುತ್ತಿರುವಾಗಲೇ, ಬೆಳಗ್ಗೆ ಸುಮಾರು 11 ಗಂಟೆಗೆ ವೇಳೆಗೆ ಸಮೀಪದ ಹೀರೇಗೌಡನ ಹುಂಡಿ ಬಳಿ ಸತೀಶ್ ಎಂಬವರ ಜಮೀನಿನಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಈ ಬಗ್ಗೆ ಸ್ಥಳೀಯ ರೈತರು ನೀಡಿದ ಖಚಿತ ಮಾಹಿತಿ ಮೇರೆಗೆ ಕೂಡಲೇ ಸಾಕಾನೆಗಳನ್ನು ಸ್ಥಳಕ್ಕೆ ಕರೆತಂದ ಅರಣ್ಯ ಇಲಾಖೆ ಹುಲಿಗಾಗಿ ಶೋಧ ಆರಂಭಿಸಿದೆ. ಬಳಿಕ ಹುಲಿ ಚಲನವಲನಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹುಲಿಯು ಸಂಜೆ ಸುಮಾರು 6 ಗಂಟೆ ವೇಳೆ ಹುಲಿಯು ಸಮೀಪದ ಹನುಮಂತನಗರ ಎಂಬಲ್ಲಿ ಪತ್ತೆಯಾಗಿರುವ ಖಚಿತ ಮಾಹಿತಿ ಮಾಹಿತಿ ಮೇರೆಗೆ ಸಾಕಾನೆ ಮೂಲಕ ತೆರಳಿದ ಡಾ.ರಮೇಶ್ ಹಾಗೂ ಡಾ.ವಸೀಂ ಮಿರ್ಜಾ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.

ಸದ್ಯ ಸೆರೆಯಾಗಿರುವ ಹುಲಿ ಸುಮಾರು 6 ವರ್ಷದ ಹೆಣ್ಣು ಹುಲಿಯಾಗಿದ್ದು, ಹುಲಿಯು ಯಾವುದೇ ಗಾಯವಿಲ್ಲದೆ ಆರೋಗ್ಯಕರವಾಗಿದೆ ಎಂದು ಅರಣ್ಯ ಇಲಾಖೆ ಖಚಿತಪಡಿಸಿದೆ.

ಸ್ಥಳಕ್ಕೆ ಶಾಸಕ  ದರ್ಶನ್ ಧ್ರುವನಾರಾಯಣ ಭೇಟಿ:

ಇದೇ ವೇಳೆ ಮಂಗಳವಾರ ಬೆಳಗ್ಗೆ ಮುಳ್ಳೂರಿಗೆ ಭೇಟಿ ನೀಡಿದ ನಂಜನಗೂಡು ಶಾಸಕ ದರ್ಶನ್ ಧ್ರುವ ನಾರಾಯಣ ರೈತರೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರೈತನ ಮೇಲೆ ಹುಲಿ ದಾಳಿಯಾಗಿರುವ ದುಃಖಕರ ವಿಚಾರ. ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದ್ದು, ಸ್ಥಳೀಯರು ಅದಕ್ಕೆ ಸಹಕಾರ ನೀಡಬೇಕು. ಯಾರೂ ಆತಂಕಕ್ಕೊಳಗಾಗುವುದು ಬೇಡ. ಮಾನವ ಪ್ರಾಣಿ ಸಂಘರ್ಷಕ್ಕೆ ಕಡಿವಾಣ ಹಾಕಲು ಕ್ರಮಕೈಗೊಳ್ಳಲಾಗುವುದು. ದಾಳಿಗೊಳಗಾದ ರೈತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದರು.

ಪ್ರಸ್ತುತ ಸೆರೆಯಾದ ಹುಲಿ ಭಾನುವಾರ ರೈತನ ಮೇಲೆ ದಾಳಿ ಮಾಡಿ ಬಲಿ ಪಡೆದ ಹುಲಿಯೋ ಅಥವಾ ಇದು ಬೇರೆ ಹುಲಿಯೋ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಆಂದೋಲನ ಪತ್ರಿಕೆಗೆ ಮಾಹಿತಿ ನೀಡಿದರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

3 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago