ಮೈಸೂರು

ಮುಳ್ಳೂರು ಸಮೀಪದ ಹೀರೇಗೌಡನಹುಂಡಿಯಲ್ಲಿ ಹುಲಿ ಸೆರೆ

ಮೈಸೂರು : ನಂಜನಗೂಡು ತಾಲೂಕಿನ ಮುಳ್ಳೂರು ಸಮೀಪದ ಬೆಣ್ಣೆಗೆರೆಯ ರಾಜಶೇಖರ್ ಎಂಬವರನ್ನು ಬಲಿ ಪಡೆದಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುವ ವೇಳೆಯೇ ಮುಳ್ಳೂರಿನಿಂದ ಸುಮಾರು 10 ಕಿ.ಮೀ. ದೂರದ ಹೀರೇಗೌಡನಹುಂಡಿ ಸಮೀಪ ಜಮೀನಿನಲ್ಲಿ ಹುಲಿಯೊಂದು ಪತ್ತೆಯಾಗಿದ್ದು, ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ರಾಜಶೇಖರ್ ಅವರನ್ನು ಬಲಿ ಪಡೆದಿದ್ದ ಹುಲಿಯ ಸೆರೆಗೆ ಮಂಗಳವಾರವೂ ರೋಹಿತಾ, ಭೀಮಾ, ಮಹೇಂದ್ರ ಸಾಕಾನೆಗಳ ಮೂಲಕ ಬಂಡೀಪುರ ಅರಣ್ಯ ವ್ಯಾಪ್ತಿಯ ನುಗು, ಕಲ್ಕರೆ, ಯಡಿಯಾಲ ಉಪ ವಿಭಾಗದ ಸುಮಾರು 130ಕ್ಕೂ ಅಧಿಕ ಸಿಬ್ಬಂದಿ ಕೂಂಬಿಂಗ್ ಆರಂಭಿಸಿ ಹಂತಕ ಹುಲಿಗಾಗಿ ತೀವ್ರಶೋಧ ನಡೆಸುತ್ತಿರುವಾಗಲೇ, ಬೆಳಗ್ಗೆ ಸುಮಾರು 11 ಗಂಟೆಗೆ ವೇಳೆಗೆ ಸಮೀಪದ ಹೀರೇಗೌಡನ ಹುಂಡಿ ಬಳಿ ಸತೀಶ್ ಎಂಬವರ ಜಮೀನಿನಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಈ ಬಗ್ಗೆ ಸ್ಥಳೀಯ ರೈತರು ನೀಡಿದ ಖಚಿತ ಮಾಹಿತಿ ಮೇರೆಗೆ ಕೂಡಲೇ ಸಾಕಾನೆಗಳನ್ನು ಸ್ಥಳಕ್ಕೆ ಕರೆತಂದ ಅರಣ್ಯ ಇಲಾಖೆ ಹುಲಿಗಾಗಿ ಶೋಧ ಆರಂಭಿಸಿದೆ. ಬಳಿಕ ಹುಲಿ ಚಲನವಲನಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹುಲಿಯು ಸಂಜೆ ಸುಮಾರು 6 ಗಂಟೆ ವೇಳೆ ಹುಲಿಯು ಸಮೀಪದ ಹನುಮಂತನಗರ ಎಂಬಲ್ಲಿ ಪತ್ತೆಯಾಗಿರುವ ಖಚಿತ ಮಾಹಿತಿ ಮಾಹಿತಿ ಮೇರೆಗೆ ಸಾಕಾನೆ ಮೂಲಕ ತೆರಳಿದ ಡಾ.ರಮೇಶ್ ಹಾಗೂ ಡಾ.ವಸೀಂ ಮಿರ್ಜಾ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.

ಸದ್ಯ ಸೆರೆಯಾಗಿರುವ ಹುಲಿ ಸುಮಾರು 6 ವರ್ಷದ ಹೆಣ್ಣು ಹುಲಿಯಾಗಿದ್ದು, ಹುಲಿಯು ಯಾವುದೇ ಗಾಯವಿಲ್ಲದೆ ಆರೋಗ್ಯಕರವಾಗಿದೆ ಎಂದು ಅರಣ್ಯ ಇಲಾಖೆ ಖಚಿತಪಡಿಸಿದೆ.

ಸ್ಥಳಕ್ಕೆ ಶಾಸಕ  ದರ್ಶನ್ ಧ್ರುವನಾರಾಯಣ ಭೇಟಿ:

ಇದೇ ವೇಳೆ ಮಂಗಳವಾರ ಬೆಳಗ್ಗೆ ಮುಳ್ಳೂರಿಗೆ ಭೇಟಿ ನೀಡಿದ ನಂಜನಗೂಡು ಶಾಸಕ ದರ್ಶನ್ ಧ್ರುವ ನಾರಾಯಣ ರೈತರೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರೈತನ ಮೇಲೆ ಹುಲಿ ದಾಳಿಯಾಗಿರುವ ದುಃಖಕರ ವಿಚಾರ. ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದ್ದು, ಸ್ಥಳೀಯರು ಅದಕ್ಕೆ ಸಹಕಾರ ನೀಡಬೇಕು. ಯಾರೂ ಆತಂಕಕ್ಕೊಳಗಾಗುವುದು ಬೇಡ. ಮಾನವ ಪ್ರಾಣಿ ಸಂಘರ್ಷಕ್ಕೆ ಕಡಿವಾಣ ಹಾಕಲು ಕ್ರಮಕೈಗೊಳ್ಳಲಾಗುವುದು. ದಾಳಿಗೊಳಗಾದ ರೈತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದರು.

ಪ್ರಸ್ತುತ ಸೆರೆಯಾದ ಹುಲಿ ಭಾನುವಾರ ರೈತನ ಮೇಲೆ ದಾಳಿ ಮಾಡಿ ಬಲಿ ಪಡೆದ ಹುಲಿಯೋ ಅಥವಾ ಇದು ಬೇರೆ ಹುಲಿಯೋ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಆಂದೋಲನ ಪತ್ರಿಕೆಗೆ ಮಾಹಿತಿ ನೀಡಿದರು

ಆಂದೋಲನ ಡೆಸ್ಕ್

Recent Posts

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

14 mins ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

9 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

13 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

13 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

13 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

13 hours ago