ಮೈಸೂರು

ಕಾವ್ಯ ಮತ್ತು ಗಾಯನವನ್ನು ಒಳಗೊಂಡ ವಿಶಿಷ್ಟಕಲೆ ಗಮಕ :ವಿದ್ವಾಂಸ ಡಾ.ಎಚ್.ವಿ.ನಾಗರಾಜರಾವ್

ಮೈಸೂರು: ಗಮಕ ಕಲೆ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿಯೇ ಕಾವ್ಯ ಮತ್ತು ಗಾಯನವನ್ನು ಒಳಗೊಂಡಿರುವ ವೈಶಿಷ್ಟ್ಯ ಪೂರ್ಣವಾದ ಕಲೆಯಾಗಿದೆ. ಇದಕ್ಕೆ ಕಾರಣ ನಮ್ಮ ಕನ್ನಡ ಸಾಹಿತ್ಯದಲ್ಲಿರುವ ಕಾವ್ಯ ಸಂಪತ್ತು ಎಂದು ಸಂಸ್ಕೃತ ವಿದ್ವಾಂಸ ಡಾ.ಎಚ್.ವಿ.ನಾಗರಾಜರಾವ್ ಅಭಿಪ್ರಾಯಪಟ್ಟರು.

ಕುಮಾರ ವ್ಯಾಸ ಪ್ರಶಸ್ತಿ ಪುರಸ್ಕೃತ ಗಮಕಿ ಕೃ.ರಾಮಚಂದ್ರ ಅವರ ಅಭಿನಂದನಾ ಕಾರ್ಯಕ್ರಮವನ್ನು ನಗರದ ಜೆಎಲ್ ಬಿ ರಸ್ತೆಯ ಬಳಿ ಇರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಕೃತವೂ ಸೇರಿದಂತೆ ಜಗತ್ತಿನ ಯಾವ ಭಾಷೆಯಲ್ಲೂ ಇಲ್ಲದ ಷಟ್ಪದಿ ಸಾಹಿತ್ಯ ಕನ್ನಡ ಭಾಷೆಯಲ್ಲಿರುವುದು ಕನ್ನಡ ಸಾಹಿತ್ಯದ ವಿಶೇಷವಾಗಿದೆ ಎಂದರು.

ಕನ್ನಡ ಸಾಹಿತ್ಯದಲ್ಲಿ ಷಟ್ಪದಿ ಸಾಹಿತ್ಯ ಇರುವುದರಿಂದಲೇ ವೈಶಿಷ್ಟ್ಯ ಪೂರ್ಣವಾಗಿ ಗಮಕ ಕಲೆ ಬೆಳೆದಿದೆ. ಗಮಕ ಕಲೆಯಲ್ಲಿ ಗಾಯನಕ್ಕೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಈ ಕಲೆಯಲ್ಲಿ ಒಂದೊಂದು ಅಕ್ಷರವನ್ನೂ ಗಮನದಲ್ಲಿಟ್ಟುಕೊಂಡು ಉಚ್ಚಾರಣೆ ಮಾಡಬೇಕು. ಗಮಕವನ್ನು ಹಾಡುವುದರ ಜೊತೆಗೆ ವ್ಯಾಖ್ಯಾನ ಮಾಡುವುದೂ ಅಷ್ಟೇ ಮುಖ್ಯವಾಗಿದೆ. ಇಂತಹ ಶ್ರೇಷ್ಠವಾದ ಗಮಕ ಕಲೆಯನ್ನು ಬೆಳೆಸುವಲ್ಲಿ ಕೃ. ರಾಮಚಂದ್ರ ಅವರ ಪಾತ್ರ ದೊಡ್ಡದಿದೆ ಎಂದು ಅವರು ತಿಳಿಸಿದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಗಮಕ ಕಲೆಯು, ಸಾಹಿತ್ಯವನ್ನು ಅರ್ಥ ಮಾಡಿಕೊಳ್ಳಲು ಇರುವ ಒಂದು ಮಾಧ್ಯಮವಾಗಿದೆ. ಎಲ್ಲಾ ಕೃತಿಗಳನ್ನು ಓದಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಗಮಕವಾಚನ ಮತ್ತು ವ್ಯಾಖ್ಯಾನವನ್ನು ಕೇಳಿದಾಗ ಕೃತೀಯ ಆಶಯ ಅರ್ಥವಾಗುತ್ತದೆ. ಗಮಕ ಕಲೆ ಸಂಗೀತ ಮತ್ತು ಸಾಹಿತ್ಯದ ಸಮನ್ವಯ ರೂಪವಾಗಿದೆ ಎಂದು ಅವರು ಬಣ್ಣಿಸಿದರು.

ಇದೇ ಸಂದರ್ಭದಲ್ಲಿ ಗಮಕಿ ಕೃ.ರಾಮಚಂದ್ರ ಮತ್ತು ತುಳಸಿ ರಾಮಚಂದ್ರ ಅವರನ್ನು ಸನ್ಮಾನಿಸಲಾಯಿತು. ಹಿರಿಯ ಸಾಹಿತಿ ನಾಡೋಜ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

8 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

8 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

8 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

10 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

10 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

10 hours ago