ಮೈಸೂರು

ಕಾವ್ಯ ಮತ್ತು ಗಾಯನವನ್ನು ಒಳಗೊಂಡ ವಿಶಿಷ್ಟಕಲೆ ಗಮಕ :ವಿದ್ವಾಂಸ ಡಾ.ಎಚ್.ವಿ.ನಾಗರಾಜರಾವ್

ಮೈಸೂರು: ಗಮಕ ಕಲೆ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿಯೇ ಕಾವ್ಯ ಮತ್ತು ಗಾಯನವನ್ನು ಒಳಗೊಂಡಿರುವ ವೈಶಿಷ್ಟ್ಯ ಪೂರ್ಣವಾದ ಕಲೆಯಾಗಿದೆ. ಇದಕ್ಕೆ ಕಾರಣ ನಮ್ಮ ಕನ್ನಡ ಸಾಹಿತ್ಯದಲ್ಲಿರುವ ಕಾವ್ಯ ಸಂಪತ್ತು ಎಂದು ಸಂಸ್ಕೃತ ವಿದ್ವಾಂಸ ಡಾ.ಎಚ್.ವಿ.ನಾಗರಾಜರಾವ್ ಅಭಿಪ್ರಾಯಪಟ್ಟರು.

ಕುಮಾರ ವ್ಯಾಸ ಪ್ರಶಸ್ತಿ ಪುರಸ್ಕೃತ ಗಮಕಿ ಕೃ.ರಾಮಚಂದ್ರ ಅವರ ಅಭಿನಂದನಾ ಕಾರ್ಯಕ್ರಮವನ್ನು ನಗರದ ಜೆಎಲ್ ಬಿ ರಸ್ತೆಯ ಬಳಿ ಇರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಕೃತವೂ ಸೇರಿದಂತೆ ಜಗತ್ತಿನ ಯಾವ ಭಾಷೆಯಲ್ಲೂ ಇಲ್ಲದ ಷಟ್ಪದಿ ಸಾಹಿತ್ಯ ಕನ್ನಡ ಭಾಷೆಯಲ್ಲಿರುವುದು ಕನ್ನಡ ಸಾಹಿತ್ಯದ ವಿಶೇಷವಾಗಿದೆ ಎಂದರು.

ಕನ್ನಡ ಸಾಹಿತ್ಯದಲ್ಲಿ ಷಟ್ಪದಿ ಸಾಹಿತ್ಯ ಇರುವುದರಿಂದಲೇ ವೈಶಿಷ್ಟ್ಯ ಪೂರ್ಣವಾಗಿ ಗಮಕ ಕಲೆ ಬೆಳೆದಿದೆ. ಗಮಕ ಕಲೆಯಲ್ಲಿ ಗಾಯನಕ್ಕೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಈ ಕಲೆಯಲ್ಲಿ ಒಂದೊಂದು ಅಕ್ಷರವನ್ನೂ ಗಮನದಲ್ಲಿಟ್ಟುಕೊಂಡು ಉಚ್ಚಾರಣೆ ಮಾಡಬೇಕು. ಗಮಕವನ್ನು ಹಾಡುವುದರ ಜೊತೆಗೆ ವ್ಯಾಖ್ಯಾನ ಮಾಡುವುದೂ ಅಷ್ಟೇ ಮುಖ್ಯವಾಗಿದೆ. ಇಂತಹ ಶ್ರೇಷ್ಠವಾದ ಗಮಕ ಕಲೆಯನ್ನು ಬೆಳೆಸುವಲ್ಲಿ ಕೃ. ರಾಮಚಂದ್ರ ಅವರ ಪಾತ್ರ ದೊಡ್ಡದಿದೆ ಎಂದು ಅವರು ತಿಳಿಸಿದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಗಮಕ ಕಲೆಯು, ಸಾಹಿತ್ಯವನ್ನು ಅರ್ಥ ಮಾಡಿಕೊಳ್ಳಲು ಇರುವ ಒಂದು ಮಾಧ್ಯಮವಾಗಿದೆ. ಎಲ್ಲಾ ಕೃತಿಗಳನ್ನು ಓದಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಗಮಕವಾಚನ ಮತ್ತು ವ್ಯಾಖ್ಯಾನವನ್ನು ಕೇಳಿದಾಗ ಕೃತೀಯ ಆಶಯ ಅರ್ಥವಾಗುತ್ತದೆ. ಗಮಕ ಕಲೆ ಸಂಗೀತ ಮತ್ತು ಸಾಹಿತ್ಯದ ಸಮನ್ವಯ ರೂಪವಾಗಿದೆ ಎಂದು ಅವರು ಬಣ್ಣಿಸಿದರು.

ಇದೇ ಸಂದರ್ಭದಲ್ಲಿ ಗಮಕಿ ಕೃ.ರಾಮಚಂದ್ರ ಮತ್ತು ತುಳಸಿ ರಾಮಚಂದ್ರ ಅವರನ್ನು ಸನ್ಮಾನಿಸಲಾಯಿತು. ಹಿರಿಯ ಸಾಹಿತಿ ನಾಡೋಜ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

17 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

17 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

17 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago