ಮೈಸೂರು

ಹುಣಸೂರು ನಗರಸಭೆಗೆ ಹೊಸದಾಗಿ ಖರೀದಿಸಿದ ಸಕ್ಕಿಂಗ್‌ ಮತ್ತು ಜಟ್ಟಿಂಗ್‌ ವಾಹನಕ್ಕೆ ಹಸಿರು ನಿಶಾನೆ

ಹುಣಸೂರು: ಒಳಚರಂಡಿ ನಿರ್ವಹಣೆಗೆ 45 ಲಕ್ಷ ಅನುದಾನದಲ್ಲಿ 6 ಸಾವಿರ ಲೀಟರ್‌ ಸಾಮರ್ಥ್ಯ ಹೊಂದಿರುವ ಸಕ್ಕಿಂಗ್‌ ಮತ್ತು ಜಟ್ಟಿಂಗ್‌ ವಾಹನ ಖರೀದಿಸುವ ಮೂಲಕ ನಗರಸಭೆಯೂ ಶುಚಿತ್ವಕ್ಕೆ ಕ್ರಮವಹಿಸಿದೆ ಎಂದು ಶಾಸಕ ಜಿ.ಡಿ.ಹರೀಶ್‌ ಗೌಡ ಹೇಳಿದರು.

ಹುಣಸೂರಿನ ಶಾಸಕರ ಕಚೇರಿ ಆವರಣದಲ್ಲಿ ಹೊಸದಾಗಿ ಖರೀದಿಸಿದ ಸಕ್ಕಿಂಗ್‌ ಮತ್ತು ಜಟ್ಟಿಂಗ್‌ ವಾಹನಕ್ಕೆ ಶಾಸಕ ಜಿ.ಡಿ.ಹರೀಶ್‌ ಗೌಡ ಮತ್ತು ಆಯುಕ್ತ ಮಾನಸ ಅವರು ಇಂದು ಹಸಿರು ನಿಶಾನೆ ತೋರಿದರು.

ಈ ವೇಳೆ ಮಾತನಾಡಿದ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು, ನಗರಸಭೆಗೆ ನಾನ್‌ ಮಿಲಿಯನ್‌ ಪ್ಲಸ್‌ ಸಿಟಿ ಯೋಜನೆ ಅಡಿಯಲ್ಲಿ 90 ಲಕ್ಷ ಅನುದಾನ ಮಂಜೂರಾಗಿದ್ದು, ಆ ಅನುದಾನದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಲೀಟರ್‌ ಸಾಮರ್ಥ್ಯದ ವಾಹನ ಖರೀದಿಸಿದೆ. ಉಳಿದ ಅನುದಾನವನ್ನು ನಗರಸಭೆ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗೆ ಮತ್ತು ನೀರು ಪೈಪ್‌ ಲೈನಿಂಗ್‌ ಮತ್ತು ಪಂಪ್‌ಹೌಸ್‌ ನಿರ್ವಹಣೆಗೆ ಬಳಸಿಕೊಳ್ಳಲಾಗಿದೆ ಎಂದರು.

ಈ ವಾಹನದಿಂದ ನಗರ ವ್ಯಾಪ್ತಿಯಲ್ಲಿ ಒಳಚರಂಡಿ ಶುಚಿಗೊಳಿಸಿ ನೀರು ಸಮರ್ಪಕವಾಗಿ ಹರಿಯಲು ಸಹಕಾರಿಯಾಗಲಿದೆ. ನಗರಸಭೆ ವ್ಯಾಪ್ತಿಯು 4 ರಿಂದ 5 ಕಿ.ಮೀ ಹರಡಿಕೊಂಡಿದ್ದು, 80 ಹೊಸ ಬಡಾವಣೆಗಳಾಗಿವೆ. ಹಾಗಾಗಿ ಸಾರ್ವಜನಿಕರ ಸಮಸ್ಯೆಗೆ ಈ ಹೆಚ್ಚುವರಿ ವಾಹನ ಸಹಕಾರಿ ಆಗಲಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತೆ ಮಾನಸ, ಸದಸ್ಯರಾದ ಕೃಷ್ಣರಾಜಗುಪ್ತ, ಶರವಣ, ಸತೀಶ್‌ ಕುಮಾರ್‌, ರಮೇಶ್‌, ದೇವರಾಜ್‌, ಯುನಿಸ್‌, ಗೀತಾ, ರಾಣಿ ಪೆರುಮಾಳ್‌, ರಾಧಾ, ಶ್ರೀನಾಥ್‌, ತಹಶೀಲ್ದಾರ್‌ ಮಂಜುನಾಥ್, ಇಓ ಮನು, ಎಇಇ ಶರ್ಮಿಳಾ, ರೂಪಾ, ಸತೀಶ್‌ ಕುಮಾರ್‌ ಹಾಜರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

27 mins ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

55 mins ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

57 mins ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

1 hour ago

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…

2 hours ago

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…

2 hours ago