ಮೈಸೂರು

ಹುಣಸೂರು ನಗರಸಭೆಗೆ ಹೊಸದಾಗಿ ಖರೀದಿಸಿದ ಸಕ್ಕಿಂಗ್‌ ಮತ್ತು ಜಟ್ಟಿಂಗ್‌ ವಾಹನಕ್ಕೆ ಹಸಿರು ನಿಶಾನೆ

ಹುಣಸೂರು: ಒಳಚರಂಡಿ ನಿರ್ವಹಣೆಗೆ 45 ಲಕ್ಷ ಅನುದಾನದಲ್ಲಿ 6 ಸಾವಿರ ಲೀಟರ್‌ ಸಾಮರ್ಥ್ಯ ಹೊಂದಿರುವ ಸಕ್ಕಿಂಗ್‌ ಮತ್ತು ಜಟ್ಟಿಂಗ್‌ ವಾಹನ ಖರೀದಿಸುವ ಮೂಲಕ ನಗರಸಭೆಯೂ ಶುಚಿತ್ವಕ್ಕೆ ಕ್ರಮವಹಿಸಿದೆ ಎಂದು ಶಾಸಕ ಜಿ.ಡಿ.ಹರೀಶ್‌ ಗೌಡ ಹೇಳಿದರು.

ಹುಣಸೂರಿನ ಶಾಸಕರ ಕಚೇರಿ ಆವರಣದಲ್ಲಿ ಹೊಸದಾಗಿ ಖರೀದಿಸಿದ ಸಕ್ಕಿಂಗ್‌ ಮತ್ತು ಜಟ್ಟಿಂಗ್‌ ವಾಹನಕ್ಕೆ ಶಾಸಕ ಜಿ.ಡಿ.ಹರೀಶ್‌ ಗೌಡ ಮತ್ತು ಆಯುಕ್ತ ಮಾನಸ ಅವರು ಇಂದು ಹಸಿರು ನಿಶಾನೆ ತೋರಿದರು.

ಈ ವೇಳೆ ಮಾತನಾಡಿದ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು, ನಗರಸಭೆಗೆ ನಾನ್‌ ಮಿಲಿಯನ್‌ ಪ್ಲಸ್‌ ಸಿಟಿ ಯೋಜನೆ ಅಡಿಯಲ್ಲಿ 90 ಲಕ್ಷ ಅನುದಾನ ಮಂಜೂರಾಗಿದ್ದು, ಆ ಅನುದಾನದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಲೀಟರ್‌ ಸಾಮರ್ಥ್ಯದ ವಾಹನ ಖರೀದಿಸಿದೆ. ಉಳಿದ ಅನುದಾನವನ್ನು ನಗರಸಭೆ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗೆ ಮತ್ತು ನೀರು ಪೈಪ್‌ ಲೈನಿಂಗ್‌ ಮತ್ತು ಪಂಪ್‌ಹೌಸ್‌ ನಿರ್ವಹಣೆಗೆ ಬಳಸಿಕೊಳ್ಳಲಾಗಿದೆ ಎಂದರು.

ಈ ವಾಹನದಿಂದ ನಗರ ವ್ಯಾಪ್ತಿಯಲ್ಲಿ ಒಳಚರಂಡಿ ಶುಚಿಗೊಳಿಸಿ ನೀರು ಸಮರ್ಪಕವಾಗಿ ಹರಿಯಲು ಸಹಕಾರಿಯಾಗಲಿದೆ. ನಗರಸಭೆ ವ್ಯಾಪ್ತಿಯು 4 ರಿಂದ 5 ಕಿ.ಮೀ ಹರಡಿಕೊಂಡಿದ್ದು, 80 ಹೊಸ ಬಡಾವಣೆಗಳಾಗಿವೆ. ಹಾಗಾಗಿ ಸಾರ್ವಜನಿಕರ ಸಮಸ್ಯೆಗೆ ಈ ಹೆಚ್ಚುವರಿ ವಾಹನ ಸಹಕಾರಿ ಆಗಲಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತೆ ಮಾನಸ, ಸದಸ್ಯರಾದ ಕೃಷ್ಣರಾಜಗುಪ್ತ, ಶರವಣ, ಸತೀಶ್‌ ಕುಮಾರ್‌, ರಮೇಶ್‌, ದೇವರಾಜ್‌, ಯುನಿಸ್‌, ಗೀತಾ, ರಾಣಿ ಪೆರುಮಾಳ್‌, ರಾಧಾ, ಶ್ರೀನಾಥ್‌, ತಹಶೀಲ್ದಾರ್‌ ಮಂಜುನಾಥ್, ಇಓ ಮನು, ಎಇಇ ಶರ್ಮಿಳಾ, ರೂಪಾ, ಸತೀಶ್‌ ಕುಮಾರ್‌ ಹಾಜರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

28 mins ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

4 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

5 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

6 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

6 hours ago