ಹುಣಸೂರು: ಒಳಚರಂಡಿ ನಿರ್ವಹಣೆಗೆ 45 ಲಕ್ಷ ಅನುದಾನದಲ್ಲಿ 6 ಸಾವಿರ ಲೀಟರ್ ಸಾಮರ್ಥ್ಯ ಹೊಂದಿರುವ ಸಕ್ಕಿಂಗ್ ಮತ್ತು ಜಟ್ಟಿಂಗ್ ವಾಹನ ಖರೀದಿಸುವ ಮೂಲಕ ನಗರಸಭೆಯೂ ಶುಚಿತ್ವಕ್ಕೆ ಕ್ರಮವಹಿಸಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.
ಹುಣಸೂರಿನ ಶಾಸಕರ ಕಚೇರಿ ಆವರಣದಲ್ಲಿ ಹೊಸದಾಗಿ ಖರೀದಿಸಿದ ಸಕ್ಕಿಂಗ್ ಮತ್ತು ಜಟ್ಟಿಂಗ್ ವಾಹನಕ್ಕೆ ಶಾಸಕ ಜಿ.ಡಿ.ಹರೀಶ್ ಗೌಡ ಮತ್ತು ಆಯುಕ್ತ ಮಾನಸ ಅವರು ಇಂದು ಹಸಿರು ನಿಶಾನೆ ತೋರಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಡಿ.ಹರೀಶ್ ಗೌಡ ಅವರು, ನಗರಸಭೆಗೆ ನಾನ್ ಮಿಲಿಯನ್ ಪ್ಲಸ್ ಸಿಟಿ ಯೋಜನೆ ಅಡಿಯಲ್ಲಿ 90 ಲಕ್ಷ ಅನುದಾನ ಮಂಜೂರಾಗಿದ್ದು, ಆ ಅನುದಾನದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಲೀಟರ್ ಸಾಮರ್ಥ್ಯದ ವಾಹನ ಖರೀದಿಸಿದೆ. ಉಳಿದ ಅನುದಾನವನ್ನು ನಗರಸಭೆ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗೆ ಮತ್ತು ನೀರು ಪೈಪ್ ಲೈನಿಂಗ್ ಮತ್ತು ಪಂಪ್ಹೌಸ್ ನಿರ್ವಹಣೆಗೆ ಬಳಸಿಕೊಳ್ಳಲಾಗಿದೆ ಎಂದರು.
ಈ ವಾಹನದಿಂದ ನಗರ ವ್ಯಾಪ್ತಿಯಲ್ಲಿ ಒಳಚರಂಡಿ ಶುಚಿಗೊಳಿಸಿ ನೀರು ಸಮರ್ಪಕವಾಗಿ ಹರಿಯಲು ಸಹಕಾರಿಯಾಗಲಿದೆ. ನಗರಸಭೆ ವ್ಯಾಪ್ತಿಯು 4 ರಿಂದ 5 ಕಿ.ಮೀ ಹರಡಿಕೊಂಡಿದ್ದು, 80 ಹೊಸ ಬಡಾವಣೆಗಳಾಗಿವೆ. ಹಾಗಾಗಿ ಸಾರ್ವಜನಿಕರ ಸಮಸ್ಯೆಗೆ ಈ ಹೆಚ್ಚುವರಿ ವಾಹನ ಸಹಕಾರಿ ಆಗಲಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತೆ ಮಾನಸ, ಸದಸ್ಯರಾದ ಕೃಷ್ಣರಾಜಗುಪ್ತ, ಶರವಣ, ಸತೀಶ್ ಕುಮಾರ್, ರಮೇಶ್, ದೇವರಾಜ್, ಯುನಿಸ್, ಗೀತಾ, ರಾಣಿ ಪೆರುಮಾಳ್, ರಾಧಾ, ಶ್ರೀನಾಥ್, ತಹಶೀಲ್ದಾರ್ ಮಂಜುನಾಥ್, ಇಓ ಮನು, ಎಇಇ ಶರ್ಮಿಳಾ, ರೂಪಾ, ಸತೀಶ್ ಕುಮಾರ್ ಹಾಜರಿದ್ದರು.
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…