ಹುಣಸೂರು: ಒಳಚರಂಡಿ ನಿರ್ವಹಣೆಗೆ 45 ಲಕ್ಷ ಅನುದಾನದಲ್ಲಿ 6 ಸಾವಿರ ಲೀಟರ್ ಸಾಮರ್ಥ್ಯ ಹೊಂದಿರುವ ಸಕ್ಕಿಂಗ್ ಮತ್ತು ಜಟ್ಟಿಂಗ್ ವಾಹನ ಖರೀದಿಸುವ ಮೂಲಕ ನಗರಸಭೆಯೂ ಶುಚಿತ್ವಕ್ಕೆ ಕ್ರಮವಹಿಸಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.
ಹುಣಸೂರಿನ ಶಾಸಕರ ಕಚೇರಿ ಆವರಣದಲ್ಲಿ ಹೊಸದಾಗಿ ಖರೀದಿಸಿದ ಸಕ್ಕಿಂಗ್ ಮತ್ತು ಜಟ್ಟಿಂಗ್ ವಾಹನಕ್ಕೆ ಶಾಸಕ ಜಿ.ಡಿ.ಹರೀಶ್ ಗೌಡ ಮತ್ತು ಆಯುಕ್ತ ಮಾನಸ ಅವರು ಇಂದು ಹಸಿರು ನಿಶಾನೆ ತೋರಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಡಿ.ಹರೀಶ್ ಗೌಡ ಅವರು, ನಗರಸಭೆಗೆ ನಾನ್ ಮಿಲಿಯನ್ ಪ್ಲಸ್ ಸಿಟಿ ಯೋಜನೆ ಅಡಿಯಲ್ಲಿ 90 ಲಕ್ಷ ಅನುದಾನ ಮಂಜೂರಾಗಿದ್ದು, ಆ ಅನುದಾನದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಲೀಟರ್ ಸಾಮರ್ಥ್ಯದ ವಾಹನ ಖರೀದಿಸಿದೆ. ಉಳಿದ ಅನುದಾನವನ್ನು ನಗರಸಭೆ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗೆ ಮತ್ತು ನೀರು ಪೈಪ್ ಲೈನಿಂಗ್ ಮತ್ತು ಪಂಪ್ಹೌಸ್ ನಿರ್ವಹಣೆಗೆ ಬಳಸಿಕೊಳ್ಳಲಾಗಿದೆ ಎಂದರು.
ಈ ವಾಹನದಿಂದ ನಗರ ವ್ಯಾಪ್ತಿಯಲ್ಲಿ ಒಳಚರಂಡಿ ಶುಚಿಗೊಳಿಸಿ ನೀರು ಸಮರ್ಪಕವಾಗಿ ಹರಿಯಲು ಸಹಕಾರಿಯಾಗಲಿದೆ. ನಗರಸಭೆ ವ್ಯಾಪ್ತಿಯು 4 ರಿಂದ 5 ಕಿ.ಮೀ ಹರಡಿಕೊಂಡಿದ್ದು, 80 ಹೊಸ ಬಡಾವಣೆಗಳಾಗಿವೆ. ಹಾಗಾಗಿ ಸಾರ್ವಜನಿಕರ ಸಮಸ್ಯೆಗೆ ಈ ಹೆಚ್ಚುವರಿ ವಾಹನ ಸಹಕಾರಿ ಆಗಲಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತೆ ಮಾನಸ, ಸದಸ್ಯರಾದ ಕೃಷ್ಣರಾಜಗುಪ್ತ, ಶರವಣ, ಸತೀಶ್ ಕುಮಾರ್, ರಮೇಶ್, ದೇವರಾಜ್, ಯುನಿಸ್, ಗೀತಾ, ರಾಣಿ ಪೆರುಮಾಳ್, ರಾಧಾ, ಶ್ರೀನಾಥ್, ತಹಶೀಲ್ದಾರ್ ಮಂಜುನಾಥ್, ಇಓ ಮನು, ಎಇಇ ಶರ್ಮಿಳಾ, ರೂಪಾ, ಸತೀಶ್ ಕುಮಾರ್ ಹಾಜರಿದ್ದರು.
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…