ಹುಣಸೂರು: ಒಳಚರಂಡಿ ನಿರ್ವಹಣೆಗೆ 45 ಲಕ್ಷ ಅನುದಾನದಲ್ಲಿ 6 ಸಾವಿರ ಲೀಟರ್ ಸಾಮರ್ಥ್ಯ ಹೊಂದಿರುವ ಸಕ್ಕಿಂಗ್ ಮತ್ತು ಜಟ್ಟಿಂಗ್ ವಾಹನ ಖರೀದಿಸುವ ಮೂಲಕ ನಗರಸಭೆಯೂ ಶುಚಿತ್ವಕ್ಕೆ ಕ್ರಮವಹಿಸಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.
ಹುಣಸೂರಿನ ಶಾಸಕರ ಕಚೇರಿ ಆವರಣದಲ್ಲಿ ಹೊಸದಾಗಿ ಖರೀದಿಸಿದ ಸಕ್ಕಿಂಗ್ ಮತ್ತು ಜಟ್ಟಿಂಗ್ ವಾಹನಕ್ಕೆ ಶಾಸಕ ಜಿ.ಡಿ.ಹರೀಶ್ ಗೌಡ ಮತ್ತು ಆಯುಕ್ತ ಮಾನಸ ಅವರು ಇಂದು ಹಸಿರು ನಿಶಾನೆ ತೋರಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಡಿ.ಹರೀಶ್ ಗೌಡ ಅವರು, ನಗರಸಭೆಗೆ ನಾನ್ ಮಿಲಿಯನ್ ಪ್ಲಸ್ ಸಿಟಿ ಯೋಜನೆ ಅಡಿಯಲ್ಲಿ 90 ಲಕ್ಷ ಅನುದಾನ ಮಂಜೂರಾಗಿದ್ದು, ಆ ಅನುದಾನದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಲೀಟರ್ ಸಾಮರ್ಥ್ಯದ ವಾಹನ ಖರೀದಿಸಿದೆ. ಉಳಿದ ಅನುದಾನವನ್ನು ನಗರಸಭೆ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗೆ ಮತ್ತು ನೀರು ಪೈಪ್ ಲೈನಿಂಗ್ ಮತ್ತು ಪಂಪ್ಹೌಸ್ ನಿರ್ವಹಣೆಗೆ ಬಳಸಿಕೊಳ್ಳಲಾಗಿದೆ ಎಂದರು.
ಈ ವಾಹನದಿಂದ ನಗರ ವ್ಯಾಪ್ತಿಯಲ್ಲಿ ಒಳಚರಂಡಿ ಶುಚಿಗೊಳಿಸಿ ನೀರು ಸಮರ್ಪಕವಾಗಿ ಹರಿಯಲು ಸಹಕಾರಿಯಾಗಲಿದೆ. ನಗರಸಭೆ ವ್ಯಾಪ್ತಿಯು 4 ರಿಂದ 5 ಕಿ.ಮೀ ಹರಡಿಕೊಂಡಿದ್ದು, 80 ಹೊಸ ಬಡಾವಣೆಗಳಾಗಿವೆ. ಹಾಗಾಗಿ ಸಾರ್ವಜನಿಕರ ಸಮಸ್ಯೆಗೆ ಈ ಹೆಚ್ಚುವರಿ ವಾಹನ ಸಹಕಾರಿ ಆಗಲಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತೆ ಮಾನಸ, ಸದಸ್ಯರಾದ ಕೃಷ್ಣರಾಜಗುಪ್ತ, ಶರವಣ, ಸತೀಶ್ ಕುಮಾರ್, ರಮೇಶ್, ದೇವರಾಜ್, ಯುನಿಸ್, ಗೀತಾ, ರಾಣಿ ಪೆರುಮಾಳ್, ರಾಧಾ, ಶ್ರೀನಾಥ್, ತಹಶೀಲ್ದಾರ್ ಮಂಜುನಾಥ್, ಇಓ ಮನು, ಎಇಇ ಶರ್ಮಿಳಾ, ರೂಪಾ, ಸತೀಶ್ ಕುಮಾರ್ ಹಾಜರಿದ್ದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…