ಮೈಸೂರು

ನಂಜನಗೂಡು| ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅಭಿವೃದ್ಧಿ ಕಾಣದ ಗ್ರಾಮ‌

ನಂಜನಗೂಡು: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ತಾಲ್ಲೂಕಿನ ಹೆಮ್ಮರಗಾಲ ಗ್ರಾಮ ಅಭಿವೃದ್ಧಿಯನ್ನೇ ಕಾಣದೇ ಉಳಿದಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಮಳೆ ಬಂದರಂತೂ ಗ್ರಾಮದ ರಸ್ತೆಯು ಕೆಸರುಮಯವಾಗಲಿದ್ದು, ಓಡಾಡಲು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಮಕ್ಕಳು, ವೃದ್ಧರು ರಸ್ತೆಯಲ್ಲಿ ಸಂಚರಿಸಲು ಹರಸಹಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಸರಿಪಡಿಸುವಂತೆ ಹತ್ತಾರು ಬಾರಿ‌ ಮನವಿ ಮಾಡಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಕೆಸರು ರಸ್ತೆಯಲ್ಲಿ ಹಲವರು ಬಿದ್ದು ಗಾಯಗೊಂಡಿರಿವ ಘಟನೆ ಕೂಡ ನಡೆದಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನಪ್ರತಿನಿಧಿಗಳು ಮತ ಕೇಳಲು ಮನೆ ಬಾಗಿಲಿಗೆ ಬರುತ್ತಾರೆ. ಆದರೆ ನಮ್ಮ ಕಷ್ಟ ಕೇಳಲು ಯಾರೂ ಕೂಡ ಬರುವುದಿಲ್ಲ. ರಸ್ತೆ ಅಭಿವೃದ್ಧಿ ಮಾಡುವ ತನಕ ಚುನಾವಣೆಯಲ್ಲಿ ಮತಚಲಾಯಿಸಲ್ಲ ಎಂದು ರಾಜ್ಯ ಸರ್ಕಾರಕ್ಕೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

37 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

40 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

48 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

54 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

59 mins ago