ಮೈಸೂರು

ನಂಜನಗೂಡು| ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅಭಿವೃದ್ಧಿ ಕಾಣದ ಗ್ರಾಮ‌

ನಂಜನಗೂಡು: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ತಾಲ್ಲೂಕಿನ ಹೆಮ್ಮರಗಾಲ ಗ್ರಾಮ ಅಭಿವೃದ್ಧಿಯನ್ನೇ ಕಾಣದೇ ಉಳಿದಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಮಳೆ ಬಂದರಂತೂ ಗ್ರಾಮದ ರಸ್ತೆಯು ಕೆಸರುಮಯವಾಗಲಿದ್ದು, ಓಡಾಡಲು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಮಕ್ಕಳು, ವೃದ್ಧರು ರಸ್ತೆಯಲ್ಲಿ ಸಂಚರಿಸಲು ಹರಸಹಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಸರಿಪಡಿಸುವಂತೆ ಹತ್ತಾರು ಬಾರಿ‌ ಮನವಿ ಮಾಡಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಕೆಸರು ರಸ್ತೆಯಲ್ಲಿ ಹಲವರು ಬಿದ್ದು ಗಾಯಗೊಂಡಿರಿವ ಘಟನೆ ಕೂಡ ನಡೆದಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನಪ್ರತಿನಿಧಿಗಳು ಮತ ಕೇಳಲು ಮನೆ ಬಾಗಿಲಿಗೆ ಬರುತ್ತಾರೆ. ಆದರೆ ನಮ್ಮ ಕಷ್ಟ ಕೇಳಲು ಯಾರೂ ಕೂಡ ಬರುವುದಿಲ್ಲ. ರಸ್ತೆ ಅಭಿವೃದ್ಧಿ ಮಾಡುವ ತನಕ ಚುನಾವಣೆಯಲ್ಲಿ ಮತಚಲಾಯಿಸಲ್ಲ ಎಂದು ರಾಜ್ಯ ಸರ್ಕಾರಕ್ಕೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

1 hour ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

1 hour ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

1 hour ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

1 hour ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

1 hour ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

1 hour ago