ಮೈಸೂರು

ಹುಣಸೂರು: ಬೇಟೆಗಾರರ ಗುಂಡೇಟಿಗೆ ಬಲಿಯಾದ ಕಾಡುಕೋಣ!

ಹುಣಸೂರು: ನಾಗರಹೊಳೆ ಹುಲಿಸಂರಕ್ಷಿತ ಆನೆ ಚೌಕೂರು ವಲಯದಲ್ಲಿ ಬೇಟೆಗಾರರ ದಾಳಿಗೆ ಕಾಡುಕೊಣವೊಂದು ಬಲಿಯಾಗಿದೆ.

ಬಫರ್‌ ಪ್ರದೇಶಕ್ಕೆ ಸೇರಿದ ಚನ್ನಂಗಿ ಶಾಖೆಯ ದೇವಮುಚ್ಚಿ ಮೀಸಲು ಅರಣ್ಯ ಪ್ರದೇಶದ ಅಣ್ಣಿಕೆರೆ ಗಸ್ತಿನ ಸಿದ್ದಾಪುರ- ಪಿರಿಯಾಪಟ್ಟಣ ಮುಖ್ಯರಸ್ತೆಯಿಂದ ಪಾರದಕಟ್ಟೆ ಕಳ್ಳಬೇಟೆ ತಡೆ ಶಿಬಿರಕ್ಕೆ ಹೋಗುವ ಅರಣ್ಯ ಪ್ರದೇಶದಲ್ಲಿ ಗುಂಡಿನ ಶಬ್ದ ಕೇಳಿಬಂದಿದೆ. ತಕ್ಷಣ ಜಾಗೃತರಾದ ರಾತ್ರಿ ಗಸ್ತು ಅರಣ್ಯ ಸಿಬ್ಬಂದಿಗಳು ಸ್ಥಳ ಪರಿಶೀಲಿಸಿದ ವೇಳೆ ಕಳ್ಳ ಬೇಟೆಗಾರರ ಗುಂಡೇಟಿಗೆ ಕಾಡುಕೋಣ ಬಲಿಯಾಗಿರುವುದು ಕಂಡುಬಂದಿದೆ.

ಬಳಿಕ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷಕುಮಾ‌ರ್ ಚಿಕ್ಕನರಗುಂದ, ಹುಣಸೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ್ ಡಿ.ಎಸ್, ಮುಖ್ಯ ಪಶು ವೈದ್ಯಾಧಿಕಾರಿ ರಮೇಶ್, ವಲಯ ಅರಣ್ಯಾಧಿಕಾರಿ ದೇವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಕೋಣ ಬೇಟೆಯಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

41 mins ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

5 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

5 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

5 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

6 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

6 hours ago