ಹುಣಸೂರು: ನಾಗರಹೊಳೆ ಹುಲಿಸಂರಕ್ಷಿತ ಆನೆ ಚೌಕೂರು ವಲಯದಲ್ಲಿ ಬೇಟೆಗಾರರ ದಾಳಿಗೆ ಕಾಡುಕೊಣವೊಂದು ಬಲಿಯಾಗಿದೆ.
ಬಫರ್ ಪ್ರದೇಶಕ್ಕೆ ಸೇರಿದ ಚನ್ನಂಗಿ ಶಾಖೆಯ ದೇವಮುಚ್ಚಿ ಮೀಸಲು ಅರಣ್ಯ ಪ್ರದೇಶದ ಅಣ್ಣಿಕೆರೆ ಗಸ್ತಿನ ಸಿದ್ದಾಪುರ- ಪಿರಿಯಾಪಟ್ಟಣ ಮುಖ್ಯರಸ್ತೆಯಿಂದ ಪಾರದಕಟ್ಟೆ ಕಳ್ಳಬೇಟೆ ತಡೆ ಶಿಬಿರಕ್ಕೆ ಹೋಗುವ ಅರಣ್ಯ ಪ್ರದೇಶದಲ್ಲಿ ಗುಂಡಿನ ಶಬ್ದ ಕೇಳಿಬಂದಿದೆ. ತಕ್ಷಣ ಜಾಗೃತರಾದ ರಾತ್ರಿ ಗಸ್ತು ಅರಣ್ಯ ಸಿಬ್ಬಂದಿಗಳು ಸ್ಥಳ ಪರಿಶೀಲಿಸಿದ ವೇಳೆ ಕಳ್ಳ ಬೇಟೆಗಾರರ ಗುಂಡೇಟಿಗೆ ಕಾಡುಕೋಣ ಬಲಿಯಾಗಿರುವುದು ಕಂಡುಬಂದಿದೆ.
ಬಳಿಕ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ, ಹುಣಸೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ್ ಡಿ.ಎಸ್, ಮುಖ್ಯ ಪಶು ವೈದ್ಯಾಧಿಕಾರಿ ರಮೇಶ್, ವಲಯ ಅರಣ್ಯಾಧಿಕಾರಿ ದೇವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಕೋಣ ಬೇಟೆಯಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…