ಮೈಸೂರು : ಅಮಾವಾಸ್ಯೆ ದಿನ ಪತಿ ಮನೆ ಮುಂದೆ ಹೆಂಡತಿ ಮಾಟ ಮಂತ್ರ ಮಾಡಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು ಮಹಿಳೆಯನ್ನು ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಮೈಸೂರಿನ ನಾಚನಹಳ್ಳಿ ಪಾಳ್ಯದ 8ನೇ ಕ್ರಾಸ್ನಲ್ಲಿ ಸಮ್ರೀನ್ ಎಂಬ ಮಹಿಳೆ ತನ್ನ ಪರಿ ರಫಿ ಮನೆ ಮುಂದೆ ಮಾಟ ಮಾಡಿಸಿದ್ದಾಳೆ. ಪತಿಯ ಮನೆ ಮುಂದೆ ಮಡಿಕೆ, ನಿಂಬೆಹಣ್ಣು, ಮೆಣಸಿನಕಾಯಿ, ಉಪ್ಪು ಸೇರಿ ಹಲವು ವಸ್ತುಗಳನ್ನು ಹಾಕಲು ಬಂದಿದ್ದಾಗ ಸಾರ್ವಜನಿಕರು ಮಹಿಳೆಯನ್ನು ಹಿಡಿದಿದ್ದಾರೆ.
ಕೆಲವು ದಿನಗಳಿಂದ ಪತಿಯಿಂದ ದೂರವಾಗಿದ್ದ ಸಮ್ರೀನ್, ಪ್ರತಿ ಅಮಾವಾಸ್ಯೆ ದಿನ ರಫೀ ಮನೆ ಮುಂದೆ ಮಾಟ ಮಂತ್ರ ಮಾಡಿಸುತ್ತಿದ್ದಳಂತೆ. ಪ್ರತಿ ಅಮಾವಾಸ್ಯೆಯಂದು ರಫಿ ಮನೆ ಮುಂದೆ ಮಾಟ ಮಂತ್ರದ ವಸ್ತುಗಳು ಬಿದ್ದಿರುತ್ತಿದ್ದವು. ನಿನ್ನೆ(ಮಾರ್ಚ್ 21) ರಾತ್ರಿ ಮಾಟ ಮಂತ್ರದ ವಸ್ತುಗಳನ್ನು ಹಾಕುವಾಗ ರೆಡ್ ಹ್ಯಾಂಡ್ ಆಗಿ ಸಮ್ರೀನ್ಳನ್ನು ಹಿಡಿದಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಅಮಾವಾಸ್ಯೆಯ ರಾತ್ರಿಗಳನ್ನು ತಂತ್ರ-ಮಂತ್ರಗಳ ಸಿದ್ಧಿಗಾಗಿ ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಅಮವಾಸ್ಯೆಯ ರಾತ್ರಿಯಂದು ಅನೇಕರು ಮಾಟ ಮಂತ್ರಗಳನ್ನು ಮಾಡಿಸುತ್ತಾರೆ. ಈ ದಿನಗಳಲ್ಲಿ ತಾಂತ್ರಿಕರು ಮತ್ತು ಅಘೋರಿಗಳು ಅಮವಾಸ್ಯೆಯ ರಾತ್ರಿ ತಮ್ಮ ಶಕ್ತಿಯನ್ನು ಸಾಧಿಸುತ್ತಾರೆ ಎನ್ನಲಾಗುತ್ತದೆ. ಕೆಲ ವಿಶೇಷ ದಿನಗಳಂದು ಅವರು ಮಾಡುವ ತಾಂತ್ರಿಕ ಸಾಧನೆ ವಿಶೇಷ ಫಲಿತಾಂಶಗಳನ್ನು ನೀಡುತ್ತದೆ ಎಂದು ತಂತ್ರ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಅನೇಕರು ಈ ಮಾಟ-ಮಂತ್ರಗಳನ್ನು ನಂಬುವುದಿಲ್ಲ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…