ಮೈಸೂರು : ಅಮಾವಾಸ್ಯೆ ದಿನ ಪತಿ ಮನೆ ಮುಂದೆ ಹೆಂಡತಿ ಮಾಟ ಮಂತ್ರ ಮಾಡಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು ಮಹಿಳೆಯನ್ನು ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಮೈಸೂರಿನ ನಾಚನಹಳ್ಳಿ ಪಾಳ್ಯದ 8ನೇ ಕ್ರಾಸ್ನಲ್ಲಿ ಸಮ್ರೀನ್ ಎಂಬ ಮಹಿಳೆ ತನ್ನ ಪರಿ ರಫಿ ಮನೆ ಮುಂದೆ ಮಾಟ ಮಾಡಿಸಿದ್ದಾಳೆ. ಪತಿಯ ಮನೆ ಮುಂದೆ ಮಡಿಕೆ, ನಿಂಬೆಹಣ್ಣು, ಮೆಣಸಿನಕಾಯಿ, ಉಪ್ಪು ಸೇರಿ ಹಲವು ವಸ್ತುಗಳನ್ನು ಹಾಕಲು ಬಂದಿದ್ದಾಗ ಸಾರ್ವಜನಿಕರು ಮಹಿಳೆಯನ್ನು ಹಿಡಿದಿದ್ದಾರೆ.
ಕೆಲವು ದಿನಗಳಿಂದ ಪತಿಯಿಂದ ದೂರವಾಗಿದ್ದ ಸಮ್ರೀನ್, ಪ್ರತಿ ಅಮಾವಾಸ್ಯೆ ದಿನ ರಫೀ ಮನೆ ಮುಂದೆ ಮಾಟ ಮಂತ್ರ ಮಾಡಿಸುತ್ತಿದ್ದಳಂತೆ. ಪ್ರತಿ ಅಮಾವಾಸ್ಯೆಯಂದು ರಫಿ ಮನೆ ಮುಂದೆ ಮಾಟ ಮಂತ್ರದ ವಸ್ತುಗಳು ಬಿದ್ದಿರುತ್ತಿದ್ದವು. ನಿನ್ನೆ(ಮಾರ್ಚ್ 21) ರಾತ್ರಿ ಮಾಟ ಮಂತ್ರದ ವಸ್ತುಗಳನ್ನು ಹಾಕುವಾಗ ರೆಡ್ ಹ್ಯಾಂಡ್ ಆಗಿ ಸಮ್ರೀನ್ಳನ್ನು ಹಿಡಿದಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಅಮಾವಾಸ್ಯೆಯ ರಾತ್ರಿಗಳನ್ನು ತಂತ್ರ-ಮಂತ್ರಗಳ ಸಿದ್ಧಿಗಾಗಿ ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಅಮವಾಸ್ಯೆಯ ರಾತ್ರಿಯಂದು ಅನೇಕರು ಮಾಟ ಮಂತ್ರಗಳನ್ನು ಮಾಡಿಸುತ್ತಾರೆ. ಈ ದಿನಗಳಲ್ಲಿ ತಾಂತ್ರಿಕರು ಮತ್ತು ಅಘೋರಿಗಳು ಅಮವಾಸ್ಯೆಯ ರಾತ್ರಿ ತಮ್ಮ ಶಕ್ತಿಯನ್ನು ಸಾಧಿಸುತ್ತಾರೆ ಎನ್ನಲಾಗುತ್ತದೆ. ಕೆಲ ವಿಶೇಷ ದಿನಗಳಂದು ಅವರು ಮಾಡುವ ತಾಂತ್ರಿಕ ಸಾಧನೆ ವಿಶೇಷ ಫಲಿತಾಂಶಗಳನ್ನು ನೀಡುತ್ತದೆ ಎಂದು ತಂತ್ರ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಅನೇಕರು ಈ ಮಾಟ-ಮಂತ್ರಗಳನ್ನು ನಂಬುವುದಿಲ್ಲ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…