ಮೈಸೂರು : ಅಮಾವಾಸ್ಯೆ ದಿನ ಪತಿ ಮನೆ ಮುಂದೆ ಹೆಂಡತಿ ಮಾಟ ಮಂತ್ರ ಮಾಡಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು ಮಹಿಳೆಯನ್ನು ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಮೈಸೂರಿನ ನಾಚನಹಳ್ಳಿ ಪಾಳ್ಯದ 8ನೇ ಕ್ರಾಸ್ನಲ್ಲಿ ಸಮ್ರೀನ್ ಎಂಬ ಮಹಿಳೆ ತನ್ನ ಪರಿ ರಫಿ ಮನೆ ಮುಂದೆ ಮಾಟ ಮಾಡಿಸಿದ್ದಾಳೆ. ಪತಿಯ ಮನೆ ಮುಂದೆ ಮಡಿಕೆ, ನಿಂಬೆಹಣ್ಣು, ಮೆಣಸಿನಕಾಯಿ, ಉಪ್ಪು ಸೇರಿ ಹಲವು ವಸ್ತುಗಳನ್ನು ಹಾಕಲು ಬಂದಿದ್ದಾಗ ಸಾರ್ವಜನಿಕರು ಮಹಿಳೆಯನ್ನು ಹಿಡಿದಿದ್ದಾರೆ.
ಕೆಲವು ದಿನಗಳಿಂದ ಪತಿಯಿಂದ ದೂರವಾಗಿದ್ದ ಸಮ್ರೀನ್, ಪ್ರತಿ ಅಮಾವಾಸ್ಯೆ ದಿನ ರಫೀ ಮನೆ ಮುಂದೆ ಮಾಟ ಮಂತ್ರ ಮಾಡಿಸುತ್ತಿದ್ದಳಂತೆ. ಪ್ರತಿ ಅಮಾವಾಸ್ಯೆಯಂದು ರಫಿ ಮನೆ ಮುಂದೆ ಮಾಟ ಮಂತ್ರದ ವಸ್ತುಗಳು ಬಿದ್ದಿರುತ್ತಿದ್ದವು. ನಿನ್ನೆ(ಮಾರ್ಚ್ 21) ರಾತ್ರಿ ಮಾಟ ಮಂತ್ರದ ವಸ್ತುಗಳನ್ನು ಹಾಕುವಾಗ ರೆಡ್ ಹ್ಯಾಂಡ್ ಆಗಿ ಸಮ್ರೀನ್ಳನ್ನು ಹಿಡಿದಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಅಮಾವಾಸ್ಯೆಯ ರಾತ್ರಿಗಳನ್ನು ತಂತ್ರ-ಮಂತ್ರಗಳ ಸಿದ್ಧಿಗಾಗಿ ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಅಮವಾಸ್ಯೆಯ ರಾತ್ರಿಯಂದು ಅನೇಕರು ಮಾಟ ಮಂತ್ರಗಳನ್ನು ಮಾಡಿಸುತ್ತಾರೆ. ಈ ದಿನಗಳಲ್ಲಿ ತಾಂತ್ರಿಕರು ಮತ್ತು ಅಘೋರಿಗಳು ಅಮವಾಸ್ಯೆಯ ರಾತ್ರಿ ತಮ್ಮ ಶಕ್ತಿಯನ್ನು ಸಾಧಿಸುತ್ತಾರೆ ಎನ್ನಲಾಗುತ್ತದೆ. ಕೆಲ ವಿಶೇಷ ದಿನಗಳಂದು ಅವರು ಮಾಡುವ ತಾಂತ್ರಿಕ ಸಾಧನೆ ವಿಶೇಷ ಫಲಿತಾಂಶಗಳನ್ನು ನೀಡುತ್ತದೆ ಎಂದು ತಂತ್ರ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಅನೇಕರು ಈ ಮಾಟ-ಮಂತ್ರಗಳನ್ನು ನಂಬುವುದಿಲ್ಲ.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…