ಮೈಸೂರು : ಅಮಾವಾಸ್ಯೆ ದಿನ ಪತಿ ಮನೆ ಮುಂದೆ ಹೆಂಡತಿ ಮಾಟ ಮಂತ್ರ ಮಾಡಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು ಮಹಿಳೆಯನ್ನು ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಮೈಸೂರಿನ ನಾಚನಹಳ್ಳಿ ಪಾಳ್ಯದ 8ನೇ ಕ್ರಾಸ್ನಲ್ಲಿ ಸಮ್ರೀನ್ ಎಂಬ ಮಹಿಳೆ ತನ್ನ ಪರಿ ರಫಿ ಮನೆ ಮುಂದೆ ಮಾಟ ಮಾಡಿಸಿದ್ದಾಳೆ. ಪತಿಯ ಮನೆ ಮುಂದೆ ಮಡಿಕೆ, ನಿಂಬೆಹಣ್ಣು, ಮೆಣಸಿನಕಾಯಿ, ಉಪ್ಪು ಸೇರಿ ಹಲವು ವಸ್ತುಗಳನ್ನು ಹಾಕಲು ಬಂದಿದ್ದಾಗ ಸಾರ್ವಜನಿಕರು ಮಹಿಳೆಯನ್ನು ಹಿಡಿದಿದ್ದಾರೆ.
ಕೆಲವು ದಿನಗಳಿಂದ ಪತಿಯಿಂದ ದೂರವಾಗಿದ್ದ ಸಮ್ರೀನ್, ಪ್ರತಿ ಅಮಾವಾಸ್ಯೆ ದಿನ ರಫೀ ಮನೆ ಮುಂದೆ ಮಾಟ ಮಂತ್ರ ಮಾಡಿಸುತ್ತಿದ್ದಳಂತೆ. ಪ್ರತಿ ಅಮಾವಾಸ್ಯೆಯಂದು ರಫಿ ಮನೆ ಮುಂದೆ ಮಾಟ ಮಂತ್ರದ ವಸ್ತುಗಳು ಬಿದ್ದಿರುತ್ತಿದ್ದವು. ನಿನ್ನೆ(ಮಾರ್ಚ್ 21) ರಾತ್ರಿ ಮಾಟ ಮಂತ್ರದ ವಸ್ತುಗಳನ್ನು ಹಾಕುವಾಗ ರೆಡ್ ಹ್ಯಾಂಡ್ ಆಗಿ ಸಮ್ರೀನ್ಳನ್ನು ಹಿಡಿದಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಅಮಾವಾಸ್ಯೆಯ ರಾತ್ರಿಗಳನ್ನು ತಂತ್ರ-ಮಂತ್ರಗಳ ಸಿದ್ಧಿಗಾಗಿ ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಅಮವಾಸ್ಯೆಯ ರಾತ್ರಿಯಂದು ಅನೇಕರು ಮಾಟ ಮಂತ್ರಗಳನ್ನು ಮಾಡಿಸುತ್ತಾರೆ. ಈ ದಿನಗಳಲ್ಲಿ ತಾಂತ್ರಿಕರು ಮತ್ತು ಅಘೋರಿಗಳು ಅಮವಾಸ್ಯೆಯ ರಾತ್ರಿ ತಮ್ಮ ಶಕ್ತಿಯನ್ನು ಸಾಧಿಸುತ್ತಾರೆ ಎನ್ನಲಾಗುತ್ತದೆ. ಕೆಲ ವಿಶೇಷ ದಿನಗಳಂದು ಅವರು ಮಾಡುವ ತಾಂತ್ರಿಕ ಸಾಧನೆ ವಿಶೇಷ ಫಲಿತಾಂಶಗಳನ್ನು ನೀಡುತ್ತದೆ ಎಂದು ತಂತ್ರ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಅನೇಕರು ಈ ಮಾಟ-ಮಂತ್ರಗಳನ್ನು ನಂಬುವುದಿಲ್ಲ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…