ಮೈಸೂರು : ಅಮಾವಾಸ್ಯೆ ದಿನ ಪತಿ ಮನೆ ಮುಂದೆ ಹೆಂಡತಿ ಮಾಟ ಮಂತ್ರ ಮಾಡಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು ಮಹಿಳೆಯನ್ನು ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಮೈಸೂರಿನ ನಾಚನಹಳ್ಳಿ ಪಾಳ್ಯದ 8ನೇ ಕ್ರಾಸ್ನಲ್ಲಿ ಸಮ್ರೀನ್ ಎಂಬ ಮಹಿಳೆ ತನ್ನ ಪರಿ ರಫಿ ಮನೆ ಮುಂದೆ ಮಾಟ ಮಾಡಿಸಿದ್ದಾಳೆ. ಪತಿಯ ಮನೆ ಮುಂದೆ ಮಡಿಕೆ, ನಿಂಬೆಹಣ್ಣು, ಮೆಣಸಿನಕಾಯಿ, ಉಪ್ಪು ಸೇರಿ ಹಲವು ವಸ್ತುಗಳನ್ನು ಹಾಕಲು ಬಂದಿದ್ದಾಗ ಸಾರ್ವಜನಿಕರು ಮಹಿಳೆಯನ್ನು ಹಿಡಿದಿದ್ದಾರೆ.
ಕೆಲವು ದಿನಗಳಿಂದ ಪತಿಯಿಂದ ದೂರವಾಗಿದ್ದ ಸಮ್ರೀನ್, ಪ್ರತಿ ಅಮಾವಾಸ್ಯೆ ದಿನ ರಫೀ ಮನೆ ಮುಂದೆ ಮಾಟ ಮಂತ್ರ ಮಾಡಿಸುತ್ತಿದ್ದಳಂತೆ. ಪ್ರತಿ ಅಮಾವಾಸ್ಯೆಯಂದು ರಫಿ ಮನೆ ಮುಂದೆ ಮಾಟ ಮಂತ್ರದ ವಸ್ತುಗಳು ಬಿದ್ದಿರುತ್ತಿದ್ದವು. ನಿನ್ನೆ(ಮಾರ್ಚ್ 21) ರಾತ್ರಿ ಮಾಟ ಮಂತ್ರದ ವಸ್ತುಗಳನ್ನು ಹಾಕುವಾಗ ರೆಡ್ ಹ್ಯಾಂಡ್ ಆಗಿ ಸಮ್ರೀನ್ಳನ್ನು ಹಿಡಿದಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಅಮಾವಾಸ್ಯೆಯ ರಾತ್ರಿಗಳನ್ನು ತಂತ್ರ-ಮಂತ್ರಗಳ ಸಿದ್ಧಿಗಾಗಿ ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಅಮವಾಸ್ಯೆಯ ರಾತ್ರಿಯಂದು ಅನೇಕರು ಮಾಟ ಮಂತ್ರಗಳನ್ನು ಮಾಡಿಸುತ್ತಾರೆ. ಈ ದಿನಗಳಲ್ಲಿ ತಾಂತ್ರಿಕರು ಮತ್ತು ಅಘೋರಿಗಳು ಅಮವಾಸ್ಯೆಯ ರಾತ್ರಿ ತಮ್ಮ ಶಕ್ತಿಯನ್ನು ಸಾಧಿಸುತ್ತಾರೆ ಎನ್ನಲಾಗುತ್ತದೆ. ಕೆಲ ವಿಶೇಷ ದಿನಗಳಂದು ಅವರು ಮಾಡುವ ತಾಂತ್ರಿಕ ಸಾಧನೆ ವಿಶೇಷ ಫಲಿತಾಂಶಗಳನ್ನು ನೀಡುತ್ತದೆ ಎಂದು ತಂತ್ರ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಅನೇಕರು ಈ ಮಾಟ-ಮಂತ್ರಗಳನ್ನು ನಂಬುವುದಿಲ್ಲ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…