ಮೈಸೂರು

ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ : ಓರ್ವ ಪೊಲೀಸ್‌ ವಶಕ್ಕೆ

ಹೊಸೂರು : ಇಬ್ಬರು ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಒಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಅಂಕನಹಳ್ಳಿ ಕೊಪ್ಪಲು ಗ್ರಾಮದ ಕುಮಾರ್ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದು, ಮಾಯಿಗೌಡನಹಳ್ಳಿ ಗ್ರಾಮದ ಸಚಿನ್ ಅಲಿಯಾಸ್ ಕಾಕ್ರೋಜ್ ಚಾಕುವಿನಿಂದ ಇರಿದ ಅರೋಪಿ.

ಶನಿವಾರ ರಾತ್ರಿ ಕುಮಾರ್ ಮತ್ತು ಬೆಂಗಲಿಗರು ಸಚಿನ್ ಎಂಬಾತನ ಮೇಲೆ ಗಲಾಟೆ ನಡೆಸಿದ್ದು, ಭಾನುವಾರ ಬೆಳಿಗ್ಗೆ ಮಾಯಿಗೌಡನಹಳ್ಳಿ ಗ್ರಾಮಕ್ಕೆ ಬಂದ ಕುಮಾರ್‌ನ ಜತೆ ಸಚಿನ್ ಜಗಳ ತೆಗೆದು ಚಾಕುವಿನಿಂದ ಹೊಟ್ಟೆಗೆ ಚುಚ್ಚಿದ್ದಾನೆ.

ಕೂಡಲೇ ಕುಮಾರ್‌ನನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿನ್‌ನನ್ನು ಸಾಲಿಗ್ರಾಮ ಪೊಲೀಸರು ವಶಕ್ಕೆ ಪಡೆದಿದ್ದಾರೆ

ಘಟನಾ ಸ್ಥಳಕ್ಕೆ ಚುಂಚನಕಟ್ಟೆ ಉಪಪೊಲೀಸ್ ಠಾಣೆಯ ಉಪಠಾಣಾಧಿಕಾರಿ ದೊರೆಸ್ವಾಮಿ, ಸಿಬ್ಬಂದಿ ಅವಿನಾಶ್ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

18 mins ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

32 mins ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

57 mins ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

1 hour ago

ಕೊಡಗು | ಟೆಕ್ಕಿ ಶರಣ್ಯ ಕೊನೆಗೂ ಪತ್ತೆ

ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ…

1 hour ago

ತಮಿಳುನಾಡು ಚುನಾವಣೆ : ಅಫಿಡವಿಟ್‌ನಲ್ಲಿ 2 ಕ್ರಿಮಿನಲ್‌ ಪ್ರಕರಣ ಘೋಷಿಸಿಕೊಂಡ ವಿಜಯ್‌

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…

2 hours ago