ಮೈಸೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಗುಂಡ್ಲುಪೇಟೆಯ ಎಚ್.ಆರ್.ರಾಕೇಶ್ ಎಂಬ ಯುವಕನ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಈ ಮೂಲಕ ರಾಕೇಶ್ ಐದು ಜೀವಗಳಿಗೆ ನೆರವಾಗಿದ್ದಾರೆ.
ತಲೆತಿರುಗುವಿಕೆಯಿಂದ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ, ರಾಕೇಶ್ ಜುಲೈ 29ರಂದು ಮೆದುಳಿನ ಅಂಗಾಂಶ ವೈಫಲ್ಯಕ್ಕೆ ತುತ್ತಾಗಿದ್ದರು. ಬಳಿಕ ವೈದ್ಯರು ಪರಿಶೀಲಿಸಿ, ಮೆದುಳು ನಿಷ್ಕ್ರಿಯಗೊಂಡಿರುವುದನ್ನು ಘೋಷಿಸಿದ್ದರು. ಬಳಿಕ ಕುಟುಂಬದವರ ಒಪ್ಪಿಗೆ ಮೇರೆಗೆ, 2 ಕಿಡ್ನಿಗಳು, 1 ಲಿವರ್, ಹೃದಯದ ಕವಾಟಗಳು ಮತ್ತು ಕಾರ್ನಿಯಾಗಳನ್ನು ಪಡೆಯಲಾಯಿತು.
1 ಕಿಡ್ನಿ ಮತ್ತು ಲಿವರ್ ಅನ್ನು ಆಸ್ಪತ್ರೆಯ ರೋಗಿಗಳಿಗೆ ಕಸಿ ಮಾಡಲಾಯಿತು. 1 ಕಿಡ್ನಿಯನ್ನು ಜೆಎಸ್ಎಸ್ ಆಸ್ಪತ್ರೆಗೆ, ಕಾರ್ನಿಯಾಗಳನ್ನು ಕೆ.ಆರ್.ಆಸ್ಪತ್ರೆಗೆ ಹಾಗೂ ಹೃದಯದ ಕವಾಟಗಳನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ರವಾನಿಸಲಾಯಿತು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…