ಮೈಸೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಗುಂಡ್ಲುಪೇಟೆಯ ಎಚ್.ಆರ್.ರಾಕೇಶ್ ಎಂಬ ಯುವಕನ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಈ ಮೂಲಕ ರಾಕೇಶ್ ಐದು ಜೀವಗಳಿಗೆ ನೆರವಾಗಿದ್ದಾರೆ.
ತಲೆತಿರುಗುವಿಕೆಯಿಂದ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ, ರಾಕೇಶ್ ಜುಲೈ 29ರಂದು ಮೆದುಳಿನ ಅಂಗಾಂಶ ವೈಫಲ್ಯಕ್ಕೆ ತುತ್ತಾಗಿದ್ದರು. ಬಳಿಕ ವೈದ್ಯರು ಪರಿಶೀಲಿಸಿ, ಮೆದುಳು ನಿಷ್ಕ್ರಿಯಗೊಂಡಿರುವುದನ್ನು ಘೋಷಿಸಿದ್ದರು. ಬಳಿಕ ಕುಟುಂಬದವರ ಒಪ್ಪಿಗೆ ಮೇರೆಗೆ, 2 ಕಿಡ್ನಿಗಳು, 1 ಲಿವರ್, ಹೃದಯದ ಕವಾಟಗಳು ಮತ್ತು ಕಾರ್ನಿಯಾಗಳನ್ನು ಪಡೆಯಲಾಯಿತು.
1 ಕಿಡ್ನಿ ಮತ್ತು ಲಿವರ್ ಅನ್ನು ಆಸ್ಪತ್ರೆಯ ರೋಗಿಗಳಿಗೆ ಕಸಿ ಮಾಡಲಾಯಿತು. 1 ಕಿಡ್ನಿಯನ್ನು ಜೆಎಸ್ಎಸ್ ಆಸ್ಪತ್ರೆಗೆ, ಕಾರ್ನಿಯಾಗಳನ್ನು ಕೆ.ಆರ್.ಆಸ್ಪತ್ರೆಗೆ ಹಾಗೂ ಹೃದಯದ ಕವಾಟಗಳನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ರವಾನಿಸಲಾಯಿತು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…