ಪಿರಿಯಾಪಟ್ಟಣ: ಜಮೀನಿನಲ್ಲಿ ದನ ಮೇಯಿಸುತ್ತಿದ್ದ ಮಹಿಳೆಯೊಬ್ಬರ ತಾಳಿಸರ ಕಿತ್ತುಕೊಂಡು ಬೈಕ್ ನಲ್ಲಿ ಪರಾರಿಯಾಗಿದ್ದ ಯುವಕನನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದ ದೊಡ್ಡ ನಾಯಕರ ಬೀದಿ ನಿವಾಸಿ ತರುಣ್ ಕುಮಾರ್ ಬಂದಿತ ಆರೋಪಿಯಾಗಿದ್ದಾನೆ.
ಈತ ತಾಲ್ಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಶುಕ್ರವಾರ ಸಂಜೆ 4:00 ಸಮಯದಲ್ಲಿ ತಮ್ಮ ಜಮೀನಿನಲ್ಲಿ ದನ ಮೇಯಿಸುತ್ತಿದ್ದ ರಾಧಾ ಎಂಬ ರೈತ ಮಹಿಳೆಯ ಕುತ್ತಿಗೆಯಲ್ಲಿದ್ದ 10 ಗ್ರಾಂ ಚಿನ್ನದ ತಾಳಿಸರವನ್ನು ಕಿತ್ತುಕೊಂಡು ತನ್ನ ಬೈಕಿನಲ್ಲಿ ಪರಾರಿಯಾಗಿದ್ದ.
ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಗೆ ರಾಧಾ ದೂರು ನೀಡಿದ್ದರು.
ತಕ್ಷಣ ಕಾರ್ಯ ಪ್ರವೃತ್ತರಾದ ಪಿರಿಯಾಪಟ್ಟಣ ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…
ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…
ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…