ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ಮೈಸೂರಿಗೆ ಆಗಮಿಸಿರುವ ಗಜಪಡೆಯನ್ನು ಶುಕ್ರವಾರ (ಆ.23) ಸಾಂಪ್ರದಾಯಿಕವಾಗಿ ಅರಮನೆಗೆ ಸ್ವಾಗತಿಸಲಾಯಿತು.
ಆಗಸ್ಟ್ 21 ರಂದು ನಾಗರಹೊಳೆ ವನ್ಯಧಾಮದ ಹೆಬ್ಬಾಗಿಲು ವೀರನಹೊಸಹಳ್ಳಿಯಿಂದ ಗಜಪಡೆಗೆ ಪೂಜೆ ಸಲ್ಲಿಸಿ ಮೈಸೂರಿಗೆ ಕರೆ ತರುವ ಮೂಲಕ ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ನೀಡಲಾಗಿತ್ತು. ವೀರನಹೊಸಹಳ್ಳಿಯಿಂದ ಮೈಸೂರಿಗೆ ಆಗಮಿಸಿದ ಗಜಪಡೆ ನಗರದ ಅಶೋಕಪುರಂ ನಲ್ಲಿರುವ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆದಿತ್ತು.
ಅರಣ್ಯಭವನದಿಂದ ಅರಮನೆ ಕಡೆಗೆ ಇಂದು ಪಯಣ ಬೆಳಿಸಿದ ಗಜಪಡೆಗೆ ಅರಮನೆಯಲ್ಲಿಂದು ಬೆಳಿಗ್ಗೆ 10.10 ರಿಂದ 10.30 ಗಂಟೆ ವರೆಗಿನ ಶುಭ ಗಳಿಗೆಯಲ್ಲಿ ಸಾಂಪ್ರದಾಯಿಕವಾಗಿ ಭವ್ಯ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.
ಅಭಿಮನ್ಯು ನೇತೃತ್ವದ 9 ಆನೆಗಳು ಇಂದು ಅರಮನೆ ಪ್ರವೇಶಿಸಿದವು. ಅರಮನೆ ಆವರಣದಲ್ಲಿ ಗಜಪಡೆ, ಕಾವಾಡಿಗರು ಮತ್ತು ಮಾವುತರಿಗೆ ಉಳಿಯಲು ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಇಂದು ಅರಮನೆಯಲ್ಲಿ ಬೀಡು ಬಿಡಲಿರುವ ಅಭಿಮನ್ಯು ತಂಡ ಕೆಲವು ದಿನಗಳ ಬಳಿಕ ಜಂಬೂ ಸವಾರಿಯಲ್ಲಿ ಹಜ್ಜೆ ಹಾಕಲು ತಯಾರಿ ಆರಂಭಿಸಲಿವೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…