ಮೈಸೂರು

ಮೈಸೂರು ದಸರಾ 2024: ಅರಮೆನೆಗೆ ಎಂಟ್ರಿಕೊಟ್ಟ ಅಭಿಮನ್ಯು ಅಂಡ್‌ ಟೀಂ!

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ಮೈಸೂರಿಗೆ ಆಗಮಿಸಿರುವ ಗಜಪಡೆಯನ್ನು ಶುಕ್ರವಾರ (ಆ.23) ಸಾಂಪ್ರದಾಯಿಕವಾಗಿ ಅರಮನೆಗೆ ಸ್ವಾಗತಿಸಲಾಯಿತು.

ಆಗಸ್ಟ್‌ 21 ರಂದು ನಾಗರಹೊಳೆ ವನ್ಯಧಾಮದ ಹೆಬ್ಬಾಗಿಲು ವೀರನಹೊಸಹಳ್ಳಿಯಿಂದ ಗಜಪಡೆಗೆ ಪೂಜೆ ಸಲ್ಲಿಸಿ ಮೈಸೂರಿಗೆ ಕರೆ ತರುವ ಮೂಲಕ ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ನೀಡಲಾಗಿತ್ತು. ವೀರನಹೊಸಹಳ್ಳಿಯಿಂದ ಮೈಸೂರಿಗೆ ಆಗಮಿಸಿದ ಗಜಪಡೆ ನಗರದ ಅಶೋಕಪುರಂ ನಲ್ಲಿರುವ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆದಿತ್ತು.

ಅರಣ್ಯಭವನದಿಂದ ಅರಮನೆ ಕಡೆಗೆ ಇಂದು ಪಯಣ ಬೆಳಿಸಿದ ಗಜಪಡೆಗೆ ಅರಮನೆಯಲ್ಲಿಂದು ಬೆಳಿಗ್ಗೆ 10.10 ರಿಂದ 10.30 ಗಂಟೆ ವರೆಗಿನ ಶುಭ ಗಳಿಗೆಯಲ್ಲಿ ಸಾಂಪ್ರದಾಯಿಕವಾಗಿ ಭವ್ಯ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.

ಅಭಿಮನ್ಯು ನೇತೃತ್ವದ 9 ಆನೆಗಳು ಇಂದು ಅರಮನೆ ಪ್ರವೇಶಿಸಿದವು. ಅರಮನೆ ಆವರಣದಲ್ಲಿ ಗಜಪಡೆ, ಕಾವಾಡಿಗರು ಮತ್ತು ಮಾವುತರಿಗೆ ಉಳಿಯಲು ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಇಂದು ಅರಮನೆಯಲ್ಲಿ ಬೀಡು ಬಿಡಲಿರುವ ಅಭಿಮನ್ಯು ತಂಡ ಕೆಲವು ದಿನಗಳ ಬಳಿಕ ಜಂಬೂ ಸವಾರಿಯಲ್ಲಿ ಹಜ್ಜೆ ಹಾಕಲು ತಯಾರಿ ಆರಂಭಿಸಲಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

4 hours ago

ಕೊಡಗಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…

4 hours ago

ತಮಿಳುನಾಡಿಗೆ ನೀರು; 72 ಅಡಿಗೆ ಕುಸಿದ ಕಬಿನಿ ಜಲಾಶಯ

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ…

4 hours ago

ಮೇವಿನ ಕೊರತೆ; ಹಸಿರು ಮೇವು ಖರೀದಿಗೆ ಮುಂದಾದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…

4 hours ago

ಗಜಪಯಣಕ್ಕೆ ನಡೆದಿದೆ ಭರದ ಸಿದ್ಧತೆ

ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು  ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…

4 hours ago