ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ಮೈಸೂರಿಗೆ ಆಗಮಿಸಿರುವ ಗಜಪಡೆಯನ್ನು ಶುಕ್ರವಾರ (ಆ.23) ಸಾಂಪ್ರದಾಯಿಕವಾಗಿ ಅರಮನೆಗೆ ಸ್ವಾಗತಿಸಲಾಯಿತು.
ಆಗಸ್ಟ್ 21 ರಂದು ನಾಗರಹೊಳೆ ವನ್ಯಧಾಮದ ಹೆಬ್ಬಾಗಿಲು ವೀರನಹೊಸಹಳ್ಳಿಯಿಂದ ಗಜಪಡೆಗೆ ಪೂಜೆ ಸಲ್ಲಿಸಿ ಮೈಸೂರಿಗೆ ಕರೆ ತರುವ ಮೂಲಕ ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ನೀಡಲಾಗಿತ್ತು. ವೀರನಹೊಸಹಳ್ಳಿಯಿಂದ ಮೈಸೂರಿಗೆ ಆಗಮಿಸಿದ ಗಜಪಡೆ ನಗರದ ಅಶೋಕಪುರಂ ನಲ್ಲಿರುವ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆದಿತ್ತು.
ಅರಣ್ಯಭವನದಿಂದ ಅರಮನೆ ಕಡೆಗೆ ಇಂದು ಪಯಣ ಬೆಳಿಸಿದ ಗಜಪಡೆಗೆ ಅರಮನೆಯಲ್ಲಿಂದು ಬೆಳಿಗ್ಗೆ 10.10 ರಿಂದ 10.30 ಗಂಟೆ ವರೆಗಿನ ಶುಭ ಗಳಿಗೆಯಲ್ಲಿ ಸಾಂಪ್ರದಾಯಿಕವಾಗಿ ಭವ್ಯ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.
ಅಭಿಮನ್ಯು ನೇತೃತ್ವದ 9 ಆನೆಗಳು ಇಂದು ಅರಮನೆ ಪ್ರವೇಶಿಸಿದವು. ಅರಮನೆ ಆವರಣದಲ್ಲಿ ಗಜಪಡೆ, ಕಾವಾಡಿಗರು ಮತ್ತು ಮಾವುತರಿಗೆ ಉಳಿಯಲು ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಇಂದು ಅರಮನೆಯಲ್ಲಿ ಬೀಡು ಬಿಡಲಿರುವ ಅಭಿಮನ್ಯು ತಂಡ ಕೆಲವು ದಿನಗಳ ಬಳಿಕ ಜಂಬೂ ಸವಾರಿಯಲ್ಲಿ ಹಜ್ಜೆ ಹಾಕಲು ತಯಾರಿ ಆರಂಭಿಸಲಿವೆ.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…