dasaea ़ऺ 750 taleemu
ಮೈಸೂರು : ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮಾಡುವ ಗಜಪಡೆಗೆ ಬುಧವಾರ ಸಂಜೆ ಭಾರ ಹೊರುವ ತಾಲೀಮನ್ನು ನಡೆಸಲಾಯಿತು. ಅರಮನೆ ಒಳಗಿನ ಕೋಡಿ ಸೋಮೇಶ್ವರ ದೇವಾಲಯದ ಬಳಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಕ್ಯಾಪ್ಟನ್ ಅಭಿಮನ್ಯು ಆನೆಗೆ ಭಾರ ಹೊರುವ ತಾಲೀಮನ್ನು ಆರಂಭಿಸಲಾಗಿದೆ.
ಈಗಾಗಲೇ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 14 ಗಜಪಡೆ ಎರಡು ಹಂತದಲ್ಲಿ ಆಗಮಿಸಿ ತಾಲೀಮು ಹಾಗೂ ಪೌಷ್ಟಿಕ ಆಹಾರದ ಜೊತೆಗೆ ಅರಮನೆಯ ವಾತಾವರಣಕ್ಕೆ ಹೊಂದಿಕೊಂಡಿವೆ. ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ಅರಮನೆಯಿಂದ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ತಾಲೀಮು ನಡೆಸಲಾಗುತ್ತಿದೆ. ಇದರ ಎರಡನೇ ಹಂತವಾಗಿ ಬುಧವಾರ(ಸೆ.3) ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿಗೆ ಚಿನ್ನದ ಅಂಬಾರಿ ಹೊರುವುದಕ್ಕಾಗಿ ನಡೆಸುವ ತಾಲೀಮು ಮರಳು ಮೂಟೆ ಹೊರುವುದನ್ನು ನಡೆಸಲಾಯಿತು.
ಇದನ್ನು ಓದಿ: ದಸರಾ ಉದ್ಘಾಟನೆ | ಬಾನು ಮುಷ್ತಾಕ್ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ
ಮೊದಲ ದಿನ 500 ಕೆ.ಜಿ ತೂಕದ ಭಾರ
ಅಭಿಮನ್ಯು ಆನೆಗೆ 200 ಕೆ.ಜಿ ತೂಕದ ಗಾದಿ, ನಮ್ದ, ಚಾರ್ಮ ಹಾಗೂ 300 ಕೆ.ಜಿ ತೂಕದಷ್ಟು ಮರಳಿನ ಮೂಟೆಯನ್ನು ಹಾಕಿ ಸುಮಾರು 500 ಕೆ.ಜಿ ಭಾರವನ್ನು ಅಭಿಮನ್ಯು ಆನೆ ಹೊತ್ತುಕೊಂಡು ಸಾಗಿತು. ಅಭಿಮನ್ಯು ಪಕ್ಕ ಕುಮ್ಕಿ ಆನೆಯಾಗಿ ಕಾವೇರಿ ಹಾಗೂ ಹೇಮಾವತಿ ಸಾಥ್ ನೀಡಿದವು. ಮುಂದಿನ ದಿನಗಳಲ್ಲಿ ಮಹೇಂದ್ರ, ಧನಂಜಯ, ಭೀಮ ಹಾಗೂ ಏಕಲವ್ಯ ಆನೆಗಳಿಗೂ ಭಾರ ಹೊರುವ ತಾಲೀಮನ್ನು ನಡೆಸಲಾಗುವುದು. ಈಗಾಗಲೇ 14 ಆನೆಗಳು ತಾಲೀಮಿನಲ್ಲಿ ಭಾಗವಹಿಸಿದ್ದು, ಮುಂದಿನ ದಿನಗಳಲ್ಲಿ ಭಾರ ಹೊರುವ ತಾಲೀಮಿನ ಜೊತೆಗೆ ಮರದ ಅಂಬಾರಿ ಹೊರುವ ತಾಲೀಮನ್ನು ನಡೆಸಲಾಗುವುದು ಎಂದು ಡಿಸಿಎಫ್ ಪ್ರಭುಗೌಡ ಮಾಹಿತಿ ನೀಡಿದರು.
ಭಾರ ಹೊತ್ತು ಸಾಗಿದ ಅಭಿಮನ್ಯು
ಕಳೆದ ಐದು ವರ್ಷಗಳಿಂದ ಸುಮಾರು 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು ಸಾಗುತ್ತಿರುವ ಅಭಿಮನ್ಯು ಆನೆ 500 ಕೆ.ಜಿ ತೂಕದ ಮರಳಿನ ಮೂಟೆ ಹಾಗೂ ಇತರ ವಸ್ತುಗಳನ್ನು ಹೊತ್ತು ಅರಮನೆಯ ಬಲರಾಮ ದ್ವಾರದ ಮೂಲಕ ಹೊರಟು ಜಂಬೂಸವಾರಿ ಸಾಗುವ ಮಾರ್ಗವಾದ ಕೆ.ಆರ್.ವೃತ್ತ, ಸಯ್ಯಾಜಿರಾವ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ, ಹಳೆಯ ಆರ್.ಎಂ.ಸಿ ವೃತ್ತ, ಹೈವೇ ವೃತ್ತ ಮಾರ್ಗವಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದವರೆಗೆ ಸಾಗಿತು. ಪುನಃ ಅದೇ ಮಾರ್ಗವಾಗಿ ವಾಪಸ್ ಅರಮನೆಗೆ ಗಜಪಡೆ ಬಂದಿತು. ಈ ಮೂಲಕ ಮೊದಲ ದಿನದ ಭಾರ ಹೊರುವ ತಾಲೀಮು ಯಶಸ್ವಿಯಾಗಿ ನಡೆಯಿತು.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…