ಮೈಸೂರು

ಮೈಸೂರು ದಸರಾ | ಅಭಿಮನ್ಯುವಿಗೆ ಶುರುವಾಯ್ತು 750ಕೆಜಿ ತೂಕದ ಚಿನ್ನದ ಅಂಬಾರಿ ಹೊರುವ ತಾಲೀಮು

ಮೈಸೂರು : ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮಾಡುವ ಗಜಪಡೆಗೆ ಬುಧವಾರ ಸಂಜೆ ಭಾರ ಹೊರುವ ತಾಲೀಮನ್ನು ನಡೆಸಲಾಯಿತು. ಅರಮನೆ ಒಳಗಿನ ಕೋಡಿ ಸೋಮೇಶ್ವರ ದೇವಾಲಯದ ಬಳಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಕ್ಯಾಪ್ಟನ್​ ಅಭಿಮನ್ಯು ಆನೆಗೆ ಭಾರ ಹೊರುವ ತಾಲೀಮನ್ನು ಆರಂಭಿಸಲಾಗಿದೆ.

ಈಗಾಗಲೇ ಕ್ಯಾಪ್ಟನ್​ ಅಭಿಮನ್ಯು ನೇತೃತ್ವದ 14 ಗಜಪಡೆ ಎರಡು ಹಂತದಲ್ಲಿ ಆಗಮಿಸಿ ತಾಲೀಮು ಹಾಗೂ ಪೌಷ್ಟಿಕ ಆಹಾರದ ಜೊತೆಗೆ ಅರಮನೆಯ ವಾತಾವರಣಕ್ಕೆ ಹೊಂದಿಕೊಂಡಿವೆ. ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ಅರಮನೆಯಿಂದ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ತಾಲೀಮು ನಡೆಸಲಾಗುತ್ತಿದೆ. ಇದರ ಎರಡನೇ ಹಂತವಾಗಿ ಬುಧವಾರ(ಸೆ.3) ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿಗೆ ಚಿನ್ನದ ಅಂಬಾರಿ ಹೊರುವುದಕ್ಕಾಗಿ ನಡೆಸುವ ತಾಲೀಮು ಮರಳು ಮೂಟೆ ಹೊರುವುದನ್ನು ನಡೆಸಲಾಯಿತು.

ಇದನ್ನು ಓದಿ: ದಸರಾ ಉದ್ಘಾಟನೆ | ಬಾನು ಮುಷ್ತಾಕ್‌ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಮೊದಲ ದಿನ 500 ಕೆ.ಜಿ ತೂಕದ ಭಾರ
ಅಭಿಮನ್ಯು ಆನೆಗೆ 200 ಕೆ.ಜಿ ತೂಕದ ಗಾದಿ, ನಮ್ದ, ಚಾರ್ಮ ಹಾಗೂ 300 ಕೆ.ಜಿ ತೂಕದಷ್ಟು ಮರಳಿನ ಮೂಟೆಯನ್ನು ಹಾಕಿ ಸುಮಾರು 500 ಕೆ.ಜಿ ಭಾರವನ್ನು ಅಭಿಮನ್ಯು ಆನೆ ಹೊತ್ತುಕೊಂಡು ಸಾಗಿತು. ಅಭಿಮನ್ಯು ಪಕ್ಕ ಕುಮ್ಕಿ ಆನೆಯಾಗಿ ಕಾವೇರಿ ಹಾಗೂ ಹೇಮಾವತಿ ಸಾಥ್​ ನೀಡಿದವು. ಮುಂದಿನ ದಿನಗಳಲ್ಲಿ ಮಹೇಂದ್ರ, ಧನಂಜಯ, ಭೀಮ ಹಾಗೂ ಏಕಲವ್ಯ ಆನೆಗಳಿಗೂ ಭಾರ ಹೊರುವ ತಾಲೀಮನ್ನು ನಡೆಸಲಾಗುವುದು. ಈಗಾಗಲೇ 14 ಆನೆಗಳು ತಾಲೀಮಿನಲ್ಲಿ ಭಾಗವಹಿಸಿದ್ದು, ಮುಂದಿನ ದಿನಗಳಲ್ಲಿ ಭಾರ ಹೊರುವ ತಾಲೀಮಿನ ಜೊತೆಗೆ ಮರದ ಅಂಬಾರಿ ಹೊರುವ ತಾಲೀಮನ್ನು ನಡೆಸಲಾಗುವುದು ಎಂದು ಡಿಸಿಎಫ್ ಪ್ರಭುಗೌಡ ಮಾಹಿತಿ ನೀಡಿದರು.

ಭಾರ ಹೊತ್ತು ಸಾಗಿದ ಅಭಿಮನ್ಯು
ಕಳೆದ ಐದು ವರ್ಷಗಳಿಂದ ಸುಮಾರು 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು ಸಾಗುತ್ತಿರುವ ಅಭಿಮನ್ಯು ಆನೆ 500 ಕೆ.ಜಿ ತೂಕದ ಮರಳಿನ ಮೂಟೆ ಹಾಗೂ ಇತರ ವಸ್ತುಗಳನ್ನು ಹೊತ್ತು ಅರಮನೆಯ ಬಲರಾಮ ದ್ವಾರದ ಮೂಲಕ ಹೊರಟು ಜಂಬೂಸವಾರಿ ಸಾಗುವ ಮಾರ್ಗವಾದ ಕೆ.ಆರ್.ವೃತ್ತ, ಸಯ್ಯಾಜಿರಾವ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ, ಹಳೆಯ ಆರ್.ಎಂ.ಸಿ ವೃತ್ತ, ಹೈವೇ ವೃತ್ತ ಮಾರ್ಗವಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದವರೆಗೆ ಸಾಗಿತು. ಪುನಃ ಅದೇ ಮಾರ್ಗವಾಗಿ ವಾಪಸ್ ಅರಮನೆಗೆ ಗಜಪಡೆ ಬಂದಿತು. ಈ ಮೂಲಕ ಮೊದಲ ದಿನದ ಭಾರ ಹೊರುವ ತಾಲೀಮು ಯಶಸ್ವಿಯಾಗಿ ನಡೆಯಿತು.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

7 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

9 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

9 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

9 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

10 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

10 hours ago