ಮೈಸೂರು

ಮೈಸೂರು ದಸರಾ | ಅಭಿಮನ್ಯುವಿಗೆ ಶುರುವಾಯ್ತು 750ಕೆಜಿ ತೂಕದ ಚಿನ್ನದ ಅಂಬಾರಿ ಹೊರುವ ತಾಲೀಮು

ಮೈಸೂರು : ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮಾಡುವ ಗಜಪಡೆಗೆ ಬುಧವಾರ ಸಂಜೆ ಭಾರ ಹೊರುವ ತಾಲೀಮನ್ನು ನಡೆಸಲಾಯಿತು. ಅರಮನೆ ಒಳಗಿನ ಕೋಡಿ ಸೋಮೇಶ್ವರ ದೇವಾಲಯದ ಬಳಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಕ್ಯಾಪ್ಟನ್​ ಅಭಿಮನ್ಯು ಆನೆಗೆ ಭಾರ ಹೊರುವ ತಾಲೀಮನ್ನು ಆರಂಭಿಸಲಾಗಿದೆ.

ಈಗಾಗಲೇ ಕ್ಯಾಪ್ಟನ್​ ಅಭಿಮನ್ಯು ನೇತೃತ್ವದ 14 ಗಜಪಡೆ ಎರಡು ಹಂತದಲ್ಲಿ ಆಗಮಿಸಿ ತಾಲೀಮು ಹಾಗೂ ಪೌಷ್ಟಿಕ ಆಹಾರದ ಜೊತೆಗೆ ಅರಮನೆಯ ವಾತಾವರಣಕ್ಕೆ ಹೊಂದಿಕೊಂಡಿವೆ. ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ಅರಮನೆಯಿಂದ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ತಾಲೀಮು ನಡೆಸಲಾಗುತ್ತಿದೆ. ಇದರ ಎರಡನೇ ಹಂತವಾಗಿ ಬುಧವಾರ(ಸೆ.3) ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿಗೆ ಚಿನ್ನದ ಅಂಬಾರಿ ಹೊರುವುದಕ್ಕಾಗಿ ನಡೆಸುವ ತಾಲೀಮು ಮರಳು ಮೂಟೆ ಹೊರುವುದನ್ನು ನಡೆಸಲಾಯಿತು.

ಇದನ್ನು ಓದಿ: ದಸರಾ ಉದ್ಘಾಟನೆ | ಬಾನು ಮುಷ್ತಾಕ್‌ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಮೊದಲ ದಿನ 500 ಕೆ.ಜಿ ತೂಕದ ಭಾರ
ಅಭಿಮನ್ಯು ಆನೆಗೆ 200 ಕೆ.ಜಿ ತೂಕದ ಗಾದಿ, ನಮ್ದ, ಚಾರ್ಮ ಹಾಗೂ 300 ಕೆ.ಜಿ ತೂಕದಷ್ಟು ಮರಳಿನ ಮೂಟೆಯನ್ನು ಹಾಕಿ ಸುಮಾರು 500 ಕೆ.ಜಿ ಭಾರವನ್ನು ಅಭಿಮನ್ಯು ಆನೆ ಹೊತ್ತುಕೊಂಡು ಸಾಗಿತು. ಅಭಿಮನ್ಯು ಪಕ್ಕ ಕುಮ್ಕಿ ಆನೆಯಾಗಿ ಕಾವೇರಿ ಹಾಗೂ ಹೇಮಾವತಿ ಸಾಥ್​ ನೀಡಿದವು. ಮುಂದಿನ ದಿನಗಳಲ್ಲಿ ಮಹೇಂದ್ರ, ಧನಂಜಯ, ಭೀಮ ಹಾಗೂ ಏಕಲವ್ಯ ಆನೆಗಳಿಗೂ ಭಾರ ಹೊರುವ ತಾಲೀಮನ್ನು ನಡೆಸಲಾಗುವುದು. ಈಗಾಗಲೇ 14 ಆನೆಗಳು ತಾಲೀಮಿನಲ್ಲಿ ಭಾಗವಹಿಸಿದ್ದು, ಮುಂದಿನ ದಿನಗಳಲ್ಲಿ ಭಾರ ಹೊರುವ ತಾಲೀಮಿನ ಜೊತೆಗೆ ಮರದ ಅಂಬಾರಿ ಹೊರುವ ತಾಲೀಮನ್ನು ನಡೆಸಲಾಗುವುದು ಎಂದು ಡಿಸಿಎಫ್ ಪ್ರಭುಗೌಡ ಮಾಹಿತಿ ನೀಡಿದರು.

ಭಾರ ಹೊತ್ತು ಸಾಗಿದ ಅಭಿಮನ್ಯು
ಕಳೆದ ಐದು ವರ್ಷಗಳಿಂದ ಸುಮಾರು 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು ಸಾಗುತ್ತಿರುವ ಅಭಿಮನ್ಯು ಆನೆ 500 ಕೆ.ಜಿ ತೂಕದ ಮರಳಿನ ಮೂಟೆ ಹಾಗೂ ಇತರ ವಸ್ತುಗಳನ್ನು ಹೊತ್ತು ಅರಮನೆಯ ಬಲರಾಮ ದ್ವಾರದ ಮೂಲಕ ಹೊರಟು ಜಂಬೂಸವಾರಿ ಸಾಗುವ ಮಾರ್ಗವಾದ ಕೆ.ಆರ್.ವೃತ್ತ, ಸಯ್ಯಾಜಿರಾವ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ, ಹಳೆಯ ಆರ್.ಎಂ.ಸಿ ವೃತ್ತ, ಹೈವೇ ವೃತ್ತ ಮಾರ್ಗವಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದವರೆಗೆ ಸಾಗಿತು. ಪುನಃ ಅದೇ ಮಾರ್ಗವಾಗಿ ವಾಪಸ್ ಅರಮನೆಗೆ ಗಜಪಡೆ ಬಂದಿತು. ಈ ಮೂಲಕ ಮೊದಲ ದಿನದ ಭಾರ ಹೊರುವ ತಾಲೀಮು ಯಶಸ್ವಿಯಾಗಿ ನಡೆಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago