ಮೈಸೂರು

ಮೈಸೂರು ದಸರಾ | ಅಭಿಮನ್ಯುವಿಗೆ ಶುರುವಾಯ್ತು 750ಕೆಜಿ ತೂಕದ ಚಿನ್ನದ ಅಂಬಾರಿ ಹೊರುವ ತಾಲೀಮು

ಮೈಸೂರು : ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮಾಡುವ ಗಜಪಡೆಗೆ ಬುಧವಾರ ಸಂಜೆ ಭಾರ ಹೊರುವ ತಾಲೀಮನ್ನು ನಡೆಸಲಾಯಿತು. ಅರಮನೆ ಒಳಗಿನ ಕೋಡಿ ಸೋಮೇಶ್ವರ ದೇವಾಲಯದ ಬಳಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಕ್ಯಾಪ್ಟನ್​ ಅಭಿಮನ್ಯು ಆನೆಗೆ ಭಾರ ಹೊರುವ ತಾಲೀಮನ್ನು ಆರಂಭಿಸಲಾಗಿದೆ.

ಈಗಾಗಲೇ ಕ್ಯಾಪ್ಟನ್​ ಅಭಿಮನ್ಯು ನೇತೃತ್ವದ 14 ಗಜಪಡೆ ಎರಡು ಹಂತದಲ್ಲಿ ಆಗಮಿಸಿ ತಾಲೀಮು ಹಾಗೂ ಪೌಷ್ಟಿಕ ಆಹಾರದ ಜೊತೆಗೆ ಅರಮನೆಯ ವಾತಾವರಣಕ್ಕೆ ಹೊಂದಿಕೊಂಡಿವೆ. ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ಅರಮನೆಯಿಂದ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ತಾಲೀಮು ನಡೆಸಲಾಗುತ್ತಿದೆ. ಇದರ ಎರಡನೇ ಹಂತವಾಗಿ ಬುಧವಾರ(ಸೆ.3) ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿಗೆ ಚಿನ್ನದ ಅಂಬಾರಿ ಹೊರುವುದಕ್ಕಾಗಿ ನಡೆಸುವ ತಾಲೀಮು ಮರಳು ಮೂಟೆ ಹೊರುವುದನ್ನು ನಡೆಸಲಾಯಿತು.

ಇದನ್ನು ಓದಿ: ದಸರಾ ಉದ್ಘಾಟನೆ | ಬಾನು ಮುಷ್ತಾಕ್‌ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಮೊದಲ ದಿನ 500 ಕೆ.ಜಿ ತೂಕದ ಭಾರ
ಅಭಿಮನ್ಯು ಆನೆಗೆ 200 ಕೆ.ಜಿ ತೂಕದ ಗಾದಿ, ನಮ್ದ, ಚಾರ್ಮ ಹಾಗೂ 300 ಕೆ.ಜಿ ತೂಕದಷ್ಟು ಮರಳಿನ ಮೂಟೆಯನ್ನು ಹಾಕಿ ಸುಮಾರು 500 ಕೆ.ಜಿ ಭಾರವನ್ನು ಅಭಿಮನ್ಯು ಆನೆ ಹೊತ್ತುಕೊಂಡು ಸಾಗಿತು. ಅಭಿಮನ್ಯು ಪಕ್ಕ ಕುಮ್ಕಿ ಆನೆಯಾಗಿ ಕಾವೇರಿ ಹಾಗೂ ಹೇಮಾವತಿ ಸಾಥ್​ ನೀಡಿದವು. ಮುಂದಿನ ದಿನಗಳಲ್ಲಿ ಮಹೇಂದ್ರ, ಧನಂಜಯ, ಭೀಮ ಹಾಗೂ ಏಕಲವ್ಯ ಆನೆಗಳಿಗೂ ಭಾರ ಹೊರುವ ತಾಲೀಮನ್ನು ನಡೆಸಲಾಗುವುದು. ಈಗಾಗಲೇ 14 ಆನೆಗಳು ತಾಲೀಮಿನಲ್ಲಿ ಭಾಗವಹಿಸಿದ್ದು, ಮುಂದಿನ ದಿನಗಳಲ್ಲಿ ಭಾರ ಹೊರುವ ತಾಲೀಮಿನ ಜೊತೆಗೆ ಮರದ ಅಂಬಾರಿ ಹೊರುವ ತಾಲೀಮನ್ನು ನಡೆಸಲಾಗುವುದು ಎಂದು ಡಿಸಿಎಫ್ ಪ್ರಭುಗೌಡ ಮಾಹಿತಿ ನೀಡಿದರು.

ಭಾರ ಹೊತ್ತು ಸಾಗಿದ ಅಭಿಮನ್ಯು
ಕಳೆದ ಐದು ವರ್ಷಗಳಿಂದ ಸುಮಾರು 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು ಸಾಗುತ್ತಿರುವ ಅಭಿಮನ್ಯು ಆನೆ 500 ಕೆ.ಜಿ ತೂಕದ ಮರಳಿನ ಮೂಟೆ ಹಾಗೂ ಇತರ ವಸ್ತುಗಳನ್ನು ಹೊತ್ತು ಅರಮನೆಯ ಬಲರಾಮ ದ್ವಾರದ ಮೂಲಕ ಹೊರಟು ಜಂಬೂಸವಾರಿ ಸಾಗುವ ಮಾರ್ಗವಾದ ಕೆ.ಆರ್.ವೃತ್ತ, ಸಯ್ಯಾಜಿರಾವ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ, ಹಳೆಯ ಆರ್.ಎಂ.ಸಿ ವೃತ್ತ, ಹೈವೇ ವೃತ್ತ ಮಾರ್ಗವಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದವರೆಗೆ ಸಾಗಿತು. ಪುನಃ ಅದೇ ಮಾರ್ಗವಾಗಿ ವಾಪಸ್ ಅರಮನೆಗೆ ಗಜಪಡೆ ಬಂದಿತು. ಈ ಮೂಲಕ ಮೊದಲ ದಿನದ ಭಾರ ಹೊರುವ ತಾಲೀಮು ಯಶಸ್ವಿಯಾಗಿ ನಡೆಯಿತು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

21 mins ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

47 mins ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

17 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

19 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

20 hours ago